ಪುರಸಭೆ ಮುಖ್ಯಾಧಿಕಾರಿ ಮೇಲೆ ಹಲ್ಲೆ ಕಠಿಣ ಕ್ರಮಕ್ಕೆ ಮುತ್ತಣ್ಣ ಆಗ್ರಹ

0
317

ಶಹಾಬಾದ: ಚಿಂಚೋಳಿ ಪುರಸಭೆಯ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಮಯದಲ್ಲಿ ಪುರಸಭೆಯ ಸದಸ್ಯರು ಪುರಸಭೆಯ ಮುಖ್ಯಾಧಿಕಾರಿ ಅಭಯಕುಮಾರ ಮೇಲೆ ಹಲ್ಲೆ ನಡೆಸಿರುವುದನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಜಿಲ್ಲಾಧ್ಯಕ್ಷ ಮುತ್ತಣ್ಣ ಭಂಡಾರಿ ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ.

ಪುರಸಭೆಯ ಮುಖ್ಯಾಧಿಕಾರಿ ಅಭಯಕುಮಾರ ಮೇಲೆ ಪುರಸಭೆಯ ಸದಸ್ಯ ಆನಂದ ಟೈಗರ್ ಹಾಗೂ ಇನ್ನೊಬ್ಬ ಸದಸ್ಯ ಬೋಗಸ್ ಬಿಲ್ ಮಾಡಿಕೊಡುವಂತೆ ಹಲ್ಲೆ ಮಾಡಿರುವುದನ್ನು ನಮ್ಮ ಸಂಘ ಉಗ್ರವಾಗಿ ಖಂಡಿಸುತ್ತದೆ. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಇವರನ್ನು ಬಂಧಿಸಿ ಸರಿಯಾದ ಕಠಿಣ ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಮುತ್ತಣ್ಣ ಭಂಡಾರಿ, ಕಾನೂನು ಸಲಹೆಗಾರ ಯಾಖೂಬ ಅಲಿ, ಪ್ರಧಾನ ಕಾರ್ಯದರ್ಶಿ ಗುರಲಿಂಗಪ್ಪ ಸುಲೆಕರ್ ಆಗ್ರಹಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here