ಶಹಾಬಾದ:ನಗರದ ವಾರ್ಡ ನಂ. ೨೫ ಮತ್ತು ೨೬ ರಲ್ಲಿ ಡಾಂಬರ್ ರಸ್ತೆ ನಿರ್ಮಾಣಕ್ಕೆ ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ವಾರ್ಡ ನಂ. ೨೫ ರ ಸದಸ್ಯೆಯಾದ ನಾನು ಹಾಗೂ ವಾರ್ಡ ನಂ. ೨೬ ರ ಸದಸ್ಯೆ ರಾಣಿ ರಾಜು ಪವಾರ ಪ್ರದೇಶದಲ್ಲಿ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಸುಮಾರು ೩೩ ಲಕ್ಷ ರೂ.ಅನುದಾನದಲ್ಲಿ ಡಾಂಬರೀಕರಣ ರಸ್ತೆ ನಿರ್ಮಾಣವಾಗಲಿದೆ.
ಕಾಮಗಾರಿಯನ್ನು ಗುಣಮಟ್ಟದಿಂದ ಕೂಡಿರಬೇಕು. ಗುಣಮಟ್ಟದಲ್ಲಿ ಯಾವುದೇ ರಾಜೀಯಿಲ್ಲ. ರಸ್ತೆ ಕಾಮಗಾರಿಯನ್ನು ಸೂಕ್ತ ರೀತಿಯಲ್ಲಿ ಕೈಗೊಳ್ಳಲು ವಾರ್ಡ ಜನರು ಸಹಕರಿಸಬೇಕು ಹಾಗೂ ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಕೈಗೊಳ್ಳಬೇಕು ಹಾಗೂ ಅಧಿಕಾರಿಗಳು ಸಹ ಕಳಪೆ ಕಾಮಗಾರಿಯಾಗದಂತೆ ನಿಗಾವಹಿಸಬೇಕು ಎಂದು ಸೂಚಿಸಿದ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗಾಗಿ ಸಾಕಷ್ಟು ಅಭಿವೃದ್ಧಿ ಕಾಮಗಾರಿ ಮಾಡಲಾಗಿದೆ.ಅಲ್ಲದೇ ಇನ್ನೂ ಕೂಡ ಮಾಡಲಾಗುತ್ತದೆ ಎಂದರು.ಈ ಬಾರಿ ಹೆಚ್ಚು ಮಳೆ ಬಂದಾಗ ಹಳ್ಳ ಬಂದು ನೀರಿನ ಒಡೆತಕ್ಕೆ ಸಹ ರಸ್ತೆ ಹಾಳಗಿದ್ದರಿಂದ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ರಸ್ತೆ ಡಾಂಬರೀಕರಣಗೊಳಿಸಲು ಮುಂದಾಗಿದ್ದೆವೆ ಎಂದು ಹೇಳಿದರು.
ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ, ಮುಖಂಡರಾದ ರಾಕೇಶ ಪವಾರ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕುಮಾರ ಚವ್ಹಾಣ, ಕಾಶಿನಾಥ ಜೋಗಿ,ಬಾಕ್ರೋದ್ದಿನ್, ಜಾವೀದ್, ಸಾಹೇಬ,ಅವಿನಾಶ ಕಂಬಾನೂರ, ಅಜರ್ ಸೇಠ, ಭರತ್ ರಾಠೋಡ,ಪಾಷಾಸಾಬ, ಮೌಲಾನಾ ಸಾಬ ಸೇರಿದಂತೆ ಗುತ್ತಿಗೆದಾರ ಮನೋಹರ್ ಇದ್ದರು.
ವಾಡಿ: ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರು,ಮಾಜಿ ಶಿಕ್ಷಣ ಸಚಿವರು ಹಾಗು ಕೊಳ್ಳೇಗಾಲದ ಮಾಜಿ ಶಾಸಕರಾದ…
ಕಲಬುರಗಿ: ದಕ್ಷ ಮಹಿಳಾ ಅಧಿಕಾರಿಯಾಗಿರುವ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರ ವಿರುದ್ಧ ಇತ್ತೀಚೆಗೆ ಕೆಲವರು ಇಲ್ಲಸಲ್ಲದ ಆರೋಪ…
ಬೆಂಗಳೂರು: ಹಾಲು ಉತ್ಪಾದಕರಿಗೆ ಹಾಲಾಹಲ ನೀಡಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಈಗ ಗ್ರಾಹಕರಿಗೆ ಅಕ್ಷರಶಃ ಬೆಲೆಯೇರಿಕೆಯ ವಿಷವುಣಿಸುತ್ತಿದೆ. ಹಾಲು ಉತ್ಪಾದಕರಿಗೆ…
ಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಸಾಗುವಳಿಯನ್ನು ಸಕ್ರಮಗೊಳಿಸುವ ನಮೂನೆ 50, 53 ಹಾಗೂ 57 ಬಗರ್ ಹುಕುಂ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ…
ಗೊಬ್ಬೂರನಲ್ಲಿ ಮಹಿಳಾ ಅರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ ಕಲಬುರಗಿ; ಮಹಿಳೆಯರು ಶಿಕ್ಷಿತರಾಗಿ ತಮ್ಮ ಹಕ್ಕುಗಳ ಪಡೆಯಬೇಕು. ಜೊತೆಗೆ ಪರುಷ ಪ್ರಧಾನವಾದ…
ಕಲಬುರಗಿ; ಗುಣಮಟ್ಟದ ಶಿಕ್ಷಣ ಸಂಸ್ಥೆಗಳು ಬಲಿಷ್ಠ ರಾಷ್ಟ್ರ ಕಟ್ಟಲು ಸಹಕಾರಿಗುತ್ತದೆ ಎಂದು ಶ್ರೀನಿವಾಸ ಸರಡಗಿ ಪೂಜ್ಯರಾದ ಡಾ. ರೇವಣಸಿದ್ದ ಶಿವಾಚಾರ್ಯರು…