ತಾರಫೈಲ್‌ನಲ್ಲಿ ಪುಡಿ ರೌಡಿಯ ಬರ್ಬರ ಹತ್ಯೆ

0
2008

ಕಲಬುರಗಿ: ನಗರದಲ್ಲಿ ಪುಡಿ ರೌಡಿಯೊಬ್ಬನಿಗೆ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿ ಪರಾರಿಯಾದ ಘಟನೆ ನಗರದ ತಾರಫೈಲ್ ಬಡಾವಣೆಯ ಹನುಮಾನ್ ನಗರದಲ್ಲಿ ವರದಿಯಾಗಿದೆ. ಮೃತನಿಗೆ ರಾಹುಲ್ ತಂದೆ ಅಮೃತ್ ಪವಾರ್ (24) ಎಂದು ಗುರುತಿಸಲಾಗಿದೆ.

Contact Your\'s Advertisement; 9902492681

ರಾಹುಲ್‌ನಿಗೆ ಆತನ ಗೆಳೆಯರೇ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಕೊಲೆಗೆ ನಿಖರ ಕಾರಣ ಹಾಗೂ ಕೊಲೆ ಮಾಡಿದವರು ಯಾರು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.

ರಾಹುಲ್ ಗೌಂಡಿ ಕೆಲಸ ಮಾಡುತ್ತಿದ್ದ. ಅಲ್ಲದೇ ಈ ಹಿಂದೆ ಸಣ್ಣಪುಟ್ಟ ವಿಷಯಕ್ಕೆ ಜಗಳವಾಡಿದ್ದರ ಕುರಿತು ಆತನ ವಿರುದ್ಧ ಪೋಲಿಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು ಎನ್ನಲಾಗಿದೆ. ಕಳೆದ ರಾತ್ರಿ ಆತನ ಮನೆಯ ಹತ್ತಿರವೇ ಮಾರಕಾಸ್ತ್ರಗಳಿಂದ ಕುತ್ತಿಗೆ ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಹತ್ಯೆಯಿಂದ ಮೃತನ ಕುಟುಂಬದವರು ಆಕ್ರಂದಿಸಿದರು. ಸುದ್ದಿ ತಿಳಿದು ಪಿಐ ಹಾಗೂ ಸಿಬ್ಬಂದಿಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಸ್ಟೇಷನ್ ಬಜಾರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here