ಕಲಬುರಗಿ: ಪತ್ರಕರ್ತ ಅನರ್ಬ್ ಗೋಸ್ವಾಮಿ ಅವರ ವಾಟ್ಸಪ್ ಚಾಟ್ ದಿಂದ ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗಿದಲ್ಲದೇ ದೇಶದ 40 ಸೈನಿಕರ ಸಾವನ್ನು ಸಂಭ್ರಸಿರುವ ರೀಪಬ್ಲಿಕ್ ವಾಹಿನಿಯ ಪ್ರಸಾರ ಸ್ಥಗಿತಗೊಳಿಸಿ ಅನರ್ಬ್ ಮೇಲೆ ದೇಶದ್ರೋಹದ ಪ್ರಕರಣ ನಡೆಸಿ ಕೇಂದ್ರ ಸರಕಾರ ಭದ್ರತೆಯ ಕುರಿತು ಯಾವುದೇ ರಾಜಿ ಮಾಡಿಕೊಳ್ಳಲ್ಲ ಎಂದು ಸಾಬಿತು ಪಡಿಸಲಿ ಎಂದು ಎಸ್.ಡಿ.ಪಿ ಐ ಪಕ್ಷದ ಕಾರ್ಯಕರ್ತುರು ಪ್ರತಿಭಟನೆ ನಡೆಸಿ ಆಗ್ರಹಿಸಿದ್ದಾರೆ.
ಸರಕಾರದ ಪ್ರಮುಖ ವ್ಯಕ್ತಿಗಳೊಂದಿಗೆ ಗುರುತಿಸಿಕೊಂಡ ಅನರ್ಬ್ ಗೋಸ್ವಾಮಿ ರಾಷ್ಟ್ರೀಯ ಭದ್ರತೆಯ ವಿಷಯಗಳನ್ನು ಕುರಿತು ಮಾಹಿತಿಯನ್ನು ಹಂಚಿಕೊಂಡು ಭದ್ರತೆಗೆ ಧಕ್ಕೆ ತಂದಿದ್ದು, ಕೇಂದ್ರ ಸರಕಾರ ವಿಷಯದಲ್ಲಿ ಜಾಣ ಕುರಡರಂತೆ ವರ್ತಿಸುತ್ತಿದೆ ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೀಜ್ವಾನ್ ಅಹ್ಮದ್ ಆರೋಪಿಸಿದ್ದಾರೆ.
ಸಂಘ ಪರಿವಾರದ ದೊಡ್ಡ ದೇಶಭಕ್ತಿಯ ಕೂಗುಗಳು ದೇಶದ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ವ್ಯವಸ್ಥೆಯನ್ನು ಹಾಳು ಮಾಡಲು ದೊಡ್ಡ ಪರದೆ ಹಿಂದಿನ ತಂತ್ರವನ್ನು ಮುಚ್ಚಿಹಾಕಲು ಮಾಡುತ್ತಿರುವ ಮುಖವಾಡ ಈ ಘಟನೆಯ ಮೂಲಕ ಬೆಳಕಿಗೆ ಬಂದಿದೆ. ರಾಷ್ಟ್ರದ ಭದ್ರತೆಗೆ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಮತ್ತು ಟಿಆರ್ಪಿ ರೇಟಿಂಗ್ ಪಾಯಿಂಟ್ ಹೆಚ್ಚಿಸಿ, ಖಾಸಗಿ ವ್ಯಕ್ತಿಗಳ ವ್ಯಾಪಾರ ಹೆಚ್ಚಿಸಲು ರಾಷ್ಟ್ರದ ಭದ್ರತೆಯನ್ನು ಮಾರುಕಟ್ಟೆ ಸರಕಾಗಿಸಲು ಅನುಮತಿಸಬಾರದು ಎಂದು ಒತ್ತಾಯಿಸಿದ್ದರು.
ಈ ಬಗ್ಗೆ ಕುಲಂಕುಶ ಉನ್ನತ ಮಟ್ಟದ ತನಿಖೆ ನಡೆಸಲು ತಂಡ ನೇಮಿಸಿ, ಅರ್ನಾಬ್ ನನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸಿ, ಗೌಷ್ಯ ಮಾಹಿತಿ ಪಡೆಯಲು ಸಹಾಯ ಮಾಡಿದ ಎಲ್ಲರ ವಿರುದ್ಧ ಕ್ರಮಕೈಹೊಳ್ಳಬೇಕೆಂದು ಪ್ರತಿಭಟನಾ ನೀರತ ಹೋರಾಟಗಾರರು ಆಗ್ರಹಿಸಿದರು.
ಜಿಲ್ಲಾ ಕಾರ್ಯದರ್ಶಿ ಸೈಯದ್ ಅಲೀಮ್ ಇಲಾಹಿ, ಪಂಚಾಯಿತ್ ಸದಸ್ಯರಾದ ಶಕೀಲ್ ಪಾಷಾ ಭಂಕೂರು, ಪಕ್ಷದ ಕೌನ್ಸಿಲ್ ಸದಸ್ಯರಾದ ಮೊಹಮ್ಮದ್ ಮೋಹಸಿನ್, ಸೈಯದ್ ಉದ್ದೀನ್ ಫಾರೂಕ್ ಪಕ್ಷದ ಸದಸ್ಯರ ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…