ಸುರಪುರದಲ್ಲಿ ಸಾಧನಾ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಆರಂಭ

ಸುರಪುರ: ನಗರದ ಬಡಿಗೇರಬಾವಿ ಬಳಿಯ ಕಾಳಿಕಾದೇವಿ ದೇವಸ್ಥಾನದ ಸಭಾ ಭವನದಲ್ಲಿ ಶ್ರೀ ಅಂಬಿಗರ ಚೌಡಯ್ಯ ಶೈಕ್ಷಣಿಕ ಹಾಗು ಸಾಂಸ್ಕೃತಿಕ ಕಲಾ ಸಂಘದ ಉದ್ಘಾಟನೆ ಹಾಗು ಸಧನಾ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಸ್ಥೆಯನ್ನು ಉದ್ಘಾಟಿಸಿದ ಪ್ರಾಧ್ಯಾಪಕ ಬಲಭೀಮ ದೇಸಾಯಿ ಮಾತನಾಡಿ,ಇಂದು ಅನೇಕ ಸಂಸ್ಥೆಗಳು ಕೇವಲ ಸರಕಾರದ ಯೋಜನೆಗಳ ಲಾಭ ಪಡೆಯಲು ಹುಟ್ಟಿಕೊಳ್ಳುತ್ತವೆ,ಆದರೆ ಶ್ರೀ ಅಂಬಿಗರ ಚೌಡಯ್ಯನವರ ಹೆಸರಿನ ಈ ಸಂಸ್ಥೆ ಜನರ ಉಪಯೋಗಕ್ಕೆ ಮುಂದಾಗಲಿ ಹಾಗು ಸ್ಪರ್ಧಾತ್ಮಕ ಸಂಸ್ಥೆಯ ಮೂಲಕ ತಾಲೂಕಿನ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಮುಂದಾಗಿರುವುದು ಸಂತೋಷದ ಸಂಗತಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಅಂಬಿಗವ ಚೌಡಯ್ಯನವರ ಜಯಂತಿ ಕುರಿತು ಉಪನ್ಯಾಸ ನೀಡಿದ ಮೈಲಾರಲಿಂಗೇಶ್ವರ ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲ ಡಾ: ಮಲ್ಲಿಕಾರ್ಜುನ ಕುಲಕರ್ಣಿ ಮಾತನಾಡಿ,೧೨ನೇ ಶತಮಾನದ ಬಸವಾದಿ ಶರಣರಲ್ಲಿ ಅಂಬಿಗರ ಚೌಡಯ್ಯನವರು ಒಬ್ಬ ಪ್ರಮುಖ ಶರಣರಾಗಿದ್ದರು,ಅಲ್ಲದೆ ಅವರು ಬರೆದ ಎಲ್ಲಾ ವಚನಗಳು ಸಮಾಜದಲ್ಲಿನ ಅಂಕುಡೊಂಕುಗಳನ್ನು ಮೂಢನಂಬಿಕೆ ಕಂದಾಚಾರಗಳನ್ನು ನೇರವಾಗಿ ಖಂಡಿಸಿದ್ದಾರೆ,ಅಲ್ಲದೆ ಅವರು ಬರೆದ ವಚನಗಳು ಸಂಶೋಧನೆಗೆ ಯೋಗ್ಯವಾಗಿವೆ,ಅಂತಹ ವಚನಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಅವಶ್ಯವಾಗಿದೆ ಎಂದರು.

ನಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅದ್ಯಕ್ಷರಾದ ಶ್ರೀನಿವಾಸ ಜಾಲವಾದಿ ಸಾಹಿತಿ ಬೀರಣ್ಣ ಬಿ.ಕೆ ಇತರರು ಮಾತನಾಡಿದರು.

ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜನನಿ ಪದವಿ ಮಹಾವಿದ್ಯಾಲಯದ ಉಪನ್ಯಾಸಕ ಡಾ: ಮಲ್ಲಿಕಾರ್ಜುನ ಕಮತಗಿ ಶಿಕ್ಷಕ ಹೆಚ್.ವಾಯ್ ರಾಠೋಡ ಶರಣಬಸವ ಯಾಳವಾರ ವೇದಿಕೆ ಮೇಲಿದ್ದರು,ರಾಘವೇಂದ್ರ ಭಕ್ರಿ ಸ್ವಾಗತಿಸಿದರು ಅನೀಲಕುಮಾರ ಜಿ.ಕೆ ವಂದಿಸಿದರು.

emedialine

Recent Posts

ಚಿಂಚೋಳಿ: ಸಾಲಭಾಧೆಗೆ ರೈತ ಆತ್ಮಹತ್ಯೆ

ಕಲಬುರಗಿ: ಅತಿವೃಷ್ಠಿಯಿಂದ ತೊಗರಿ, ಉದ್ದು, ಹೆಸರು ಬೆಳೆ ಮಳೆ ನೀರು ಹತ್ತಿ ನಾಶ ಮತ್ತು ಸಾಲಭಾದೆ ತಾಳದೆ ವಿಷ ಸೇವಿಸಿ…

4 mins ago

ಸುಗ್ರೀವಾಜ್ಞೆ ಮೂಲಕ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹ

ಶಹಾಬಾದ: ಸುಗ್ರೀವಾಜ್ಞೆ ಮೂಲಕ ಕೂಡಲೇ ಒಳಮೀಸಲಾತಿ ಜಾರಿಗೊಳಿಸುವಂತೆ ಅಗ್ರಹಿಸಿ ದಲಿತ ಮಾದಿಗ ಸಮನ್ವಯ ಸಮಿತಿ(ಡಿಎಂಎಸ್‍ಎಸ್)ಯಿಂದ ಗ್ರೇಡ್-2 ತಹಶೀಲ್ದಾರ್ ಗುರುರಾಜ ಸಂಗಾವಿ…

41 mins ago

ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ಬಿಡುಗಡೆಗೆ ಕಾರ್ಮಿಕರ ಆಗ್ರಹ

ಶಹಾಬಾದ: ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುವ ವಿದ್ಯಾರ್ಥಿವೇತನವನ್ನು ಶೀಘ್ರವೇ ಬಿಡುಗಡೆ ಮಾಡಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು…

43 mins ago

ದಿಗ್ಗಾಂವ ಶ್ರೀ ಭಕ್ತರ ಕ್ಷಮೆಯಾಚಿಸಲಿ

ವಾಡಿ: ಶಿಲೆಗೆ ಪ್ರಾಣಪ್ರತಿಷ್ಠೆ ನೀಡಿ ಪೂಜೆಗೆ ಅರ್ಹವಾಗಿಸುವ ಭರದಲ್ಲಿ ಶಿವಲಿಂಗದ ಮೇಲೆ ಪಾದವಿಟ್ಟು ಅಸಂಖ್ಯಾತ ಭಕ್ತರ ಮನಸ್ಸಿಗೆ ನೋವುಂಟು ಮಾಡಿದ…

45 mins ago

ಶರಣಬಸವ ವಿಶ್ವವಿದ್ಯಾಲಯದಲ್ಲಿ 14ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಜಂಟಿಯಾಗಿ, ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ…

2 hours ago

ಕಾ.ಸೀತಾರಾಮ ಯೇಚೂರಿಗೆ ಸಿಪಿಐಎಂ ಕಚೇರಿಯಲ್ಲಿ ಶೃದ್ಧಾಂಜಲಿ

ಕಲಬುರಗಿ: ಸಿಪಿಐಎಂ ಪಕ್ಷದ ಅಖಿಲ ಭಾರತ ಪ್ರದಾನ ಕಾರ್ಯದರ್ಶಿಗಳಾಗಿದ್ದ 72 ವಯಸ್ಸಿನ ಕಾ.ಸೀತಾರಾಮ ಯೇಚೂರಿಯವರು ಇಂದು ಸಂಜೆ ನಿಧನ ಹೊಂದಿದ್ದು,…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420