ಶಾಲಾ ವಿದ್ಯಾರ್ಥಿ ವೇತನ ನೀಡಬೇಕೆಂದು ಆಗ್ರಹಿಸಿ ಎಐಡಿಎಸಓ ಪ್ರತಿಭಟನೆ

0
54

ಶಹಾಬಾದ:ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ವೇತನ ನೀಡಬೇಕು, ಸಮರ್ಪಕ ಬಸ್ ಸೌಲಭ್ಯ ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಶುಕ್ರವಾರ ನೆಹರು ವೃತ್ತದಲ್ಲಿ ಎಐಡಿಎಸ್‌ಓ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿದರು.

ಎಐಡಿಎಸ್‌ಓ ಶಹಾಬಾದ ಅಧ್ಯಕ್ಷರಾದ ತುಳಜರಾಮ.ಎನ್. ಕೆ ಶಾಲಾ ಕಾಲೇಜುಗಳ ಶೈಕ್ಷಣಿಕ ವರ್ಷ ಈಗಾಗಲೇ ಪ್ರಾರಂಭವಾಗಿದ್ದು ಎಲ್ಲಾ ವರ್ಗಗಳ ವಿದ್ಯಾರ್ಥಿಳ ಶಿಷ್ಯವೇತನಕ್ಕಾಗಿ ಅರ್ಜಿಯನ್ನು ಇನ್ನೂ ಕರೆದಿಲ್ಲ. ರಾಜ್ಯದ ಸಹಸ್ರಾರು ವಿದ್ಯಾರ್ಥಿಳು ಕೊರೋನಾ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸಿದ್ದಾರೆ. ಅನೇಕ ಸಮಸ್ಯೆಗಳ ನಡುವೆ ವಿದ್ಯಾರ್ಥಿಗಳು ಮತ್ತೆ ಕಾಲೇಜುಗಳಿಗೆ ಮರಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಶಿಷ್ಯ ವೇತನವು ಅತ್ಯಾವಶ್ಯಕವಾಗಿದೆ. ಅಲ್ಲದೇ ಉಳಿದ ಎಲ್ಲಾ ಇಲಾಖೆಗಳ ಶಿಷ್ಯವೇತನವನ್ನು ಈ ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದರಲ್ಲದೇ, ಎಲ್ಲಾ ಸರ್ಕಾರಿ ಹಾಸ್ಟೇಲುಗಳಿಗೆ ಕೂಡಲೇ ಅರ್ಜಿ ಆಹ್ವಾನಿಸಿ ಪ್ರವೇಶಾತಿ ನೀಡಬೇಕು.ಹಾಸ್ಟೇಲುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಒದಗಿಸಬೇಕು. ಹೆಚ್ಚುವರಿ ಶುಲ್ಕ ಪಡೆಯುವುದನ್ನು ನಿಲ್ಲಿಸಿ,ಕಾಲೇಜುಗಳಲ್ಲಿ ಅವಶ್ಯಕ ಬೋಧಕರನ್ನು ನೇಮಕಾತಿ ಮಾಡಬೇಕೆಂದು ಒತ್ತಾಯಿಸಿದರು.

Contact Your\'s Advertisement; 9902492681

ಎಐಡಿಎಸ್‌ಓ ಸದಸ್ಯ ಕಿರಣ್.ಜಿ.ಮಾನೆ, ಎಐಡಿಎಸ್‌ಓ ಉಪಾಧ್ಯಕ್ಷ ರಮೇಶ ದೇವಕರ್, ಸಾಕ್ಷಿ ಮಾನೆ, ಅಜಯ್, ಬಾಬು ಪವಾರ್, ಶ್ರೀಧರ, ರಂಗನಾಥ ಮಾನೆ, ಅಂಬ್ರೆಶ್, ಪ್ರಜ್ವಲ್,ಸೇರಿ ಹಲವಾರು ವಿದ್ಯಾರ್ಥಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here