ಶಹಾಬಾದ:ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ವೇತನ ನೀಡಬೇಕು, ಸಮರ್ಪಕ ಬಸ್ ಸೌಲಭ್ಯ ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಶುಕ್ರವಾರ ನೆಹರು ವೃತ್ತದಲ್ಲಿ ಎಐಡಿಎಸ್ಓ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿದರು.
ಎಐಡಿಎಸ್ಓ ಶಹಾಬಾದ ಅಧ್ಯಕ್ಷರಾದ ತುಳಜರಾಮ.ಎನ್. ಕೆ ಶಾಲಾ ಕಾಲೇಜುಗಳ ಶೈಕ್ಷಣಿಕ ವರ್ಷ ಈಗಾಗಲೇ ಪ್ರಾರಂಭವಾಗಿದ್ದು ಎಲ್ಲಾ ವರ್ಗಗಳ ವಿದ್ಯಾರ್ಥಿಳ ಶಿಷ್ಯವೇತನಕ್ಕಾಗಿ ಅರ್ಜಿಯನ್ನು ಇನ್ನೂ ಕರೆದಿಲ್ಲ. ರಾಜ್ಯದ ಸಹಸ್ರಾರು ವಿದ್ಯಾರ್ಥಿಳು ಕೊರೋನಾ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸಿದ್ದಾರೆ. ಅನೇಕ ಸಮಸ್ಯೆಗಳ ನಡುವೆ ವಿದ್ಯಾರ್ಥಿಗಳು ಮತ್ತೆ ಕಾಲೇಜುಗಳಿಗೆ ಮರಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಶಿಷ್ಯ ವೇತನವು ಅತ್ಯಾವಶ್ಯಕವಾಗಿದೆ. ಅಲ್ಲದೇ ಉಳಿದ ಎಲ್ಲಾ ಇಲಾಖೆಗಳ ಶಿಷ್ಯವೇತನವನ್ನು ಈ ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದರಲ್ಲದೇ, ಎಲ್ಲಾ ಸರ್ಕಾರಿ ಹಾಸ್ಟೇಲುಗಳಿಗೆ ಕೂಡಲೇ ಅರ್ಜಿ ಆಹ್ವಾನಿಸಿ ಪ್ರವೇಶಾತಿ ನೀಡಬೇಕು.ಹಾಸ್ಟೇಲುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಒದಗಿಸಬೇಕು. ಹೆಚ್ಚುವರಿ ಶುಲ್ಕ ಪಡೆಯುವುದನ್ನು ನಿಲ್ಲಿಸಿ,ಕಾಲೇಜುಗಳಲ್ಲಿ ಅವಶ್ಯಕ ಬೋಧಕರನ್ನು ನೇಮಕಾತಿ ಮಾಡಬೇಕೆಂದು ಒತ್ತಾಯಿಸಿದರು.
ಎಐಡಿಎಸ್ಓ ಸದಸ್ಯ ಕಿರಣ್.ಜಿ.ಮಾನೆ, ಎಐಡಿಎಸ್ಓ ಉಪಾಧ್ಯಕ್ಷ ರಮೇಶ ದೇವಕರ್, ಸಾಕ್ಷಿ ಮಾನೆ, ಅಜಯ್, ಬಾಬು ಪವಾರ್, ಶ್ರೀಧರ, ರಂಗನಾಥ ಮಾನೆ, ಅಂಬ್ರೆಶ್, ಪ್ರಜ್ವಲ್,ಸೇರಿ ಹಲವಾರು ವಿದ್ಯಾರ್ಥಿಗಳು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…