32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಉದ್ಘಾಟನೆ

ಬೆಂಗಳೂರು: ಉತ್ತಮವಾಗಿರುವಂತಹ ಕಾನೂನು ಬದ್ದವಾದ ಒಂದು ಸಂಚಾರ ಸಂಸ್ಕøತಿ ಬೆಳಸಬೇಕು ಎಂಬ ಕರೆಯನ್ನು ಕನ್ನಡ ನಾಡಿನ ಜನತೆಗೆ ವಿಶೇಷವಾಗಿ ಬೆಂಗಳೂರಿನವರಿಗೆ ಕೊಡಲು ಇಚ್ಚೆ ಪಡುತ್ತೇನೆ ಎಂದು ಗೃಹ ಸಚಿವ ಬಸವರಾಜಬೊಮ್ಮಾಯಿ ಅವರು ತಿಳಿಸಿದರು.

ಇಂದು ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ 32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ 2021 ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ದೀಪ ಹಚ್ಚುವ ಮೂಲಕ ಗೃಹ ಸಚಿವ ಬಸವರಾಜಬೊಮ್ಮಾಯಿ ಉದ್ಘಾಟಿಸಿ ಸುರಕ್ಷ ರಸ್ತೆ ಸಂಚಾರ-ಆ್ಯನಿಮೇಟೆಡ್ ಕಿರುಚಿತ್ರ ಬಿಡುಗಡೆ ಮಾಡಿದರು. ಕಿರುಚಿತ್ರವು ಸಂಚಾರ ಶಿಕ್ಷಣದ ಅರಿವನ್ನು ಮೂಡಿಸುವ ಕಿರುಚಿತ್ರವಾಗಿದೆ.
ಸಚಿವರು ಮಾತನಾಡುತ್ತಾ  ಸಂಚಾರ ನಿಯಮ ಉಲ್ಲಂಘನೆ ಮಾಡುವ ಸಂಸ್ಕøತಿಯಿಂದ ಸಂಚಾರ ನಿಯಮ ಪಾಲನೆ ಮಾಡುವ ಸಂಸ್ಕøತಿಗೆ ನಾವು ಜನರನ್ನು ಬದಲಾವಣೆ ಮಾಡಿದಾಗ ಮಾತ್ರ ಒಂದು ಪರಿಪೂರ್ಣವಾದ ಒಂದು ಪರ್ಯಾಯವನ್ನು ರೂಪವನ್ನು ಕೊಡಲು ಸಾಧ್ಯವೆಂದು ಅವರು ತಿಳಿಸಿದರು.

ಜನಸಂದಣಿಗಿಂತ ಸಂಚಾರ ಹೆಚ್ಚಾಗಿದೆ. ಆದುದರಿಂದ ಆಧುನಿಕ ಟ್ರಾಫಿಕ್ ಯೋಜನೆಯಲ್ಲಿ ಬದಲಾವಣೆ ತರಬೇಕು. ತಾಂತ್ರಜ್ಞಾನವು ಆರ್ಟಿಫಿಷಿಯಲ್ ಇನ್‍ಟೆಲಿಜೆನ್ಸ್ ಇರುವ ಸಿಗ್ನಲ್, ಕ್ಯಾಮೆರಾಗಳ ಮಹತ್ವದ ಪಾತ್ರವನ್ನು ವಹಿಸಿದೆ ಎಂದರು.  ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ  ಡಾ. ಅಶ್ವತ್ಥನಾರಾಯಣ “ಮೊಳಕೆಯಲ್ಲೇ ತಿದ್ದಿರಿ” ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ಅಪಘಾತದಿಂದ ಸಾವು  ನೋವು ಹೆಚ್ಚಾಗುತ್ತಿದೆ. ಸುರಕ್ಷತೆಗೆ ಸವಾಲು ಇದೆ. ಸಮಾಜದ ಸಮಸ್ಯೆಗಳನ್ನು ಜಾಗೃತಿ ಮೂಲಕ ಸರಿಪಡಿಸಬಹುದು. ಶಿಕ್ಷಣ ಇಲಾಖೆಯು ಸಮಾಜದಲ್ಲಿ  ಸಂಚಾರ ನಿಯಮಕ್ಕೆ ಹೆಚ್ಚು ಪ್ರಾಶಸ್ತ್ಯವನ್ನು ಕೊಡಬೇಕು. ಶಾಲಾ ಕಾಲೇಜುಗಳಲ್ಲಿ ಸಂಚಾರÀ ನಿಯಮ ಪಾಲನೆಯನ್ನು ಮಕ್ಕಳಿಗೆ ತಿಳಿಸಬೇಕು ಎಂದರು.

ಬೃಹತ್ ಬೆಂಗಳೂರು ವiಹಾನಗರ ಪಾಲಿಕೆಯ ಆಡಳಿತಾಧಿಕಾರಿ ಗೌರವ್ ಗುಪ್ತಾ ಅವರು  “ರಸ್ತೆ ಸುರಕ್ಷತೆ” ಕೈಪಿಡಿ ಯನ್ನು ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಬೆಂಗಳೂರು ನಗರ ಪೊಲೀಸ್ ಆಯಕ್ತರಾದ ಕಮಲ್ ಪಂತ್ ಅವರು “ಅಪಘಾತ ವಿಮರ್ಶೆ”  ಒಂದು ಹಿನ್ನೋಟ ಕಿರುಹೊತ್ತಿಗೆ ಬಿಡುಗಡೆ ಮಾಡಿದರು. ಸ್ವಾಗತ ಭಾಷಣ ಹಾಗೂ ಪ್ರಸ್ತಾವಿಕವಾಗಿ ಸಂಚಾರ ಜಂಟಿ ಪೊಲೀಸ್ ಆಯುಕ್ತ ಡಾ. ಬಿ.ಆರ್.ರವಿಕಾಂತೇಗೌಡ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಚಿಕ್ಕಪೇಟೆ ಕ್ಷೇತ್ರದ ವಿಧಾನಸಭಾ ಸದಸ್ಯರಾದ ಡಾ. ಉದಯ್ ಬಿ. ಗರುಡಾಚಾರ್ ಅವರು ಅಧ್ಯಕ್ಷತೆ ವಹಿಸಿದ್ದರು.ಬೃಹತ್ ಬೆಂಗಳೂರು ವiಹಾನಗರ ಪಾಲಿಕೆಯ ಆಡಳಿತಾಧಿಕಾರಿ ಗೌರವ್ ಗುಪ್ತಾ, ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆಯುಕ್ತರಾದ ಪ್ರತಾಪ್ ರೆಡ್ಡಿ, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಾದ ಎನ್ ಶಿವಕುಮಾರ್, ಹಾಗೂ ಹಿರಿಯರು ಉಪಸ್ಥಿತರಿದ್ದರು.

emedialine

Recent Posts

ಅಜ್ಞಾನವೆಂಬ ಕತ್ತಲಿನಿಂದ ಜ್ಞಾನದ ಬೆಳಿಕಿನಡೆಗೆ ಕರೆದೊಯ್ಯುವ ಜ್ಯೋತಿಯೇ ಶಿಕ್ಷಕ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತವಾಗಿ ಬುಧವಾರ ಗೆಳೆಯರ ಬಳಗದ ವತಿಯಿಂದ…

4 hours ago

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಗಮನ ಸೆಳೆದ ಚೇತನ ಬಿ.ಕೋಬಾಳ್ ಸಂಗೀತ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…

13 hours ago

15ರಂದು ಮಾನವ ಸರಪಳಿ: ನಾಳೆ ಪೂರ್ವ ಭಾವಿ ಸಭೆ

ಶಹಾಬಾದ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಪ್ರೌಢಶಾಲಾ ಮುಖ್ಯ…

13 hours ago

ಸೆಪ್ಟೆಂಬರ್ 17ರಂದು ವಿಮೋಚನಾ ದಿನ ರದ್ದುಪಡಿಸಿ, ಪ್ರಜಾಸತ್ತಾತ್ಮಕ ದಿನ ಆಚರಿಸಿ: ಕೆ ನೀಲಾ

ಕಲಬುರಗಿ: ಹೈದ್ರಾಬಾದ್ ಕರ್ನಾಟಕದಲ್ಲಿ ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತಿರುವ ವಿಮೋಚನಾ ದಿನವಲ್ಲ, ಅದು ವಿಲೀನಿಕರಣದ ಅಥವಾ ಪ್ರಜಾಸತ್ತಾತ್ಮಕ ದಿನವಾಗಿದ್ದು, ವಿಮೋಚನಾ…

13 hours ago

ಸಮಿತಿಗಳ ಕಾರ್ಯ ಪರಾಮರ್ಶಿಸಿದ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ

ಕಲಬುರಗಿ; ಕಲಬುರಗಿಯಲ್ಲಿ ಇದೇ ಸೆ.17 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದ್ದರಿಂದ ಸಭೆ ಯಶಸ್ಸಿಗೆ ರಚಿಸಲಾಗಿರುವ ವಿವಿಧ ಸಮಿತಿಗಳ…

16 hours ago

SC/STಗೆ ಪಾಲಿಕೆಯಿಂದ ವಿತರಣೆಯಾಗದ ಸಂಸ್ಕೃತಿ ಸಮಾಗ್ರಿ: ಸಚಿನ ಶಿರವಾಳ ಬೇಸರ

ಕಲಬುರಗಿ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ವಿತರಿಸಬೇಕಾಗಿರುವ ಸಾಮಗ್ರಿಗಳಾದ ಕ್ರಿಕೆಟ್ ಸೈಟ್‍ ಗಳಾದ, ಬ್ಯಾಂಡ್ ಸೆಟ್‍ಗಳು ಮತ್ತು…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420