ಸುರಪುರ: ಭಾರತದ ಸ್ವಾತಂತ್ರ್ಯ ಚಳುವಳಿಗೆ ಕ್ರಾಂತಿಯ ಹೊಸ ರೂಪ ಕೊಟ್ಟವರು ನೇತಾಜಿ ಸುಭಾಷ ಚಂದ್ರ ಭೊಸ್ ಎಂದು ಸುರಪುರ ನಗರಸಭೆ ಉಪಾಧ್ಯಕ್ಷ ಮಹೇಶ ಪಾಟಿಲ್ ಸೂಗುರು ಹೇಳಿದರು.
ನಗರದ ರಂಗಂಪೇಟೆಯ ಬಸವಪ್ರಭು ಕಂಪ್ಯೂಟರ್ ಇನ್ಸ್ಟ್ಯೂಟ್ ನಲ್ಲಿ ಸಗರನಾಡು ಸೇವಾ ಪ್ರತಿಷ್ಠಾನವತಿಯಿಂದ ಏರ್ಪಡಿಸಿದ್ದ ನೇತಾಜಿ ಸುಭಾಷ ಚಂದ್ರ ಭೊಸ್ ಅವರ ಜಯಂತ್ಯೊತ್ಸವ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ, ಗಾಂಧೀಜಿಯವರ ನೇತೃತ್ವದ ಅಂಹಿಸಾವಾದದ ಚಳುವಳಿಯ ಜೊತೆಗೆ ಹೊಸತನದ ಚಳುವಳಿಗೆ ಕ್ರಾಂತಿಯ ರೂಪ ಕೊಟ್ಟು ಬ್ರಿಟೀಷರನ್ನು ಭಾರತ ಬಿಟ್ಟು ಓಡಿಸುವಲ್ಲಿ ನೇತಾಜಿಯವರ ಪಾತ್ರ ಅತ್ಯಂತ ಮಹತ್ವದಾಗಿತ್ತು ಎಂದರು.
ಇನ್ನೊರ್ವ ಅತಿಥಿಗಳಾಗಿ ಪಾಲ್ಗೊಂಡಿದ್ದ ಅನ್ನದಾತ ಪೌಂಡೆಶನ್ನ ಅಧ್ಯಕ್ಷ ರಂಗನಗೌಡ ಪಾಟೀಲ್ ದೇವಿಕೇರಾ ಮಾತನಾಡಿ ಅಜಾದ್-ಹಿಂದ್-ಫೌಜ್ ಎನ್ನುವ ಸೈನ್ಯವನ್ನು ಕಟ್ಟಿ ದೇಶದ ಯುವಜನರಲ್ಲಿ ಸ್ವಾತಂತ್ಯ್ರ ಮತ್ತು ಸ್ವಾಭಿಮಾನದ ಚಿಂತನೆ ಮೂಡಿಸುವಲ್ಲಿ ನೇತಾಜಿ ಪಟ್ಟ ಶ್ರಮ ಮಹತ್ವದ್ದು ಎಂದು ಹೇಳಿದರು.
ಕಾರ್ಯಾಕ್ರಮವನ್ನು ಸುರಪುರ ನಗರಸಭೆ ಅಧ್ಯಕ್ಷ ಶ್ರೀಮತಿ ಸುಜಾತಾ ವೇಣುಗೋಪಾಲ ನಾಯಕ ಜೇವರ್ಗಿ ಉದ್ಘಾಟಿಸಿದರು, ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನಳ್ಳಿ ಪ್ರಾಸ್ತವಿಕವಾಗಿ ಮಾತನಾಡಿದರು. ಯುವ ಮುಖಂಡ ಹರೀಶ ತ್ರಿವೇದಿ, ವಿಜಯಕುಮಾರ ಅಂಗಡಿ ಅತಿಥಿಗಳಾಗಿ ಪಾಲ್ಗೊಂಡಿದ್ದರು, ಕಾರ್ಯಕ್ರಮವನ್ನು ಹಣಮಂತ್ರಾಯ ದೇವತ್ಕಲ್ ನಿರೂಪಿಸಿದರು, ಶೃತಿ ಸಂಗಡಿಗರು ಪ್ರಾರ್ಥಿಸಿದರು, ರಾಜು ನಂದಗೀರಿ ಸ್ವಾಗತಿಸಿದರು, ಪ್ರವೀಣ ಜಕಾತಿ ವಂದಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…