ಕಲಬುರಗಿ: ಬೆಂಗಳೂರಿನ ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ಕೊಡ ಮಾಡುವ ಶಿಕ್ಷಣ ರತ್ನ ಪ್ರಶಸ್ತಿಗೆ ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಅತಿಥಿ ಉಪನ್ಯಾಸಕ ಡಾ. ಸಿದ್ಧಲಿಂಗ ದಬ್ಬಾ ಆಯ್ಕೆಯಾಗಿದ್ದಾರೆ.
ಡಾ. ದಬ್ಬಾ ಅವರ ಕಳೆದ 10 ವರ್ಷಗಳ ಕಾಲ ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದ ಸೇವೆ ಪರಿಗಣಿಸಿ ಈ ಪ್ರಶಸ್ತಿ ಕೊಡ ಮಾಡಲಾಗಿದೆ ಎಂದು ನಿತ್ಯೋತ್ಸವ ಸಂಘದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಭಂಟನಳ್ಳಿ ಗ್ರಾಮದ ಸಿದ್ಧಲಿಂಗ ದಬ್ಬಾ ಅವರು ಗುಲ್ಬರ್ಗ ವಿವಿಯ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಎಂ.ಎ. ಸ್ನಾತಕೊತ್ತರ ಪದವಿ ಪಡೆದುದಲ್ಲದೆ 2009ನೇ ಸಾಲಿನಲ್ಲಿ ಪಿಎಚ್.ಡಿ. ಪದವಿ ಕೂಡ ಪಡೆದಿದ್ದಾರೆ.
ಐನೆಲೆ ಕರಿಬಸವಾರ್ಯರು, ಸಾಹಿತ್ಯ ಸಂಭ್ರಮ ಸೇರಿಸಂತೆ ಹತ್ತಾರು ಪುಸ್ತಕಗಳನ್ನು ರಚಿಸಿದ್ದು, ಫೆ. 7ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇವರಿಗೆ ಶಿಕ್ಷಣ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…