ಬಿಸಿ ಬಿಸಿ ಸುದ್ದಿ

ದೆಹಲಿ ಮಾದರಿ ಇಡೀ ದೇಶಕ್ಕೆ ಹಬ್ಬಲಿ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ

ಬೆಂಗಳೂರು: ನಾನು ಆರೋಗ್ಯ ಸಚಿವನಾಗಿದ್ದಾಗ ದೆಹಲಿಗೆ ಭೇಟಿಕೊಟ್ಟು ಅಲ್ಲಿನ ಮೊಹಲ್ಲಾ ಕ್ಲಿನಿಕ್‌‌, ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಆಶ್ಚರ್ಯಗೊಂಡೆ, ಅರವಿಂದ್ ಕೇಜ್ರಿವಾಲ್ ಅವರ ಕ್ರಾಂತಿಕಾರಕ ಬದಲಾವಣೆಗಳನ್ನು ನೋಡಿ ಅವರ ದೊಡ್ಡ ಅಭಿಮಾನಿಯಾದೆ ಎಂದು ಶಾಸಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ನುಡಿದರು.

ಶಾಂತಿನಗರದ ಬಸಪ್ಪ ರಸ್ತೆಯಲ್ಲಿ ಇರುವ ಆಮ್ ಆದ್ಮಿ ಕ್ಲಿನಿಕ್‌ ಕಾರ್ಯವೈಖರಿ ವೀಕ್ಷಣೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಜನತೆ ಒಂದೇ ಒಂದು ಬಾರೀ ಅವಕಾಶ ಕೊಟ್ಟರು ಈ ಅವಕಾಶವನ್ನು ಬಳಸಿಕೊಂಡ ಅವರು ಜನಪರ ಸೇವೆ ಮಾಡುವುದಕ್ಕೆ ಬಳಸಿಕೊಂಡರು. ಕೇಜ್ರಿವಾಲ್ ಅವರು ಬದಲಾವಣೆ ತಂದಿರುವ ಆರೋಗ್ಯ, ಶಿಕ್ಷಣ, ಉಚಿತ ನೀರು, ವಿದ್ಯುತ್, ಅಗತ್ಯ ಮೂಲ ಸೌಕರ್ಯಗಳನ್ನು ಎಲ್ಲಾ ರಾಜ್ಯಗಳಲ್ಲೂ ಆಗಬೇಕು ಎಂದರು.

ಆಮ್ ಆದ್ಮಿ ಪಕ್ಷ ಸೇರುತ್ತೀರ ಎನ್ನುವ ಪತ್ರಕರ್ತರ ಪ್ರಶ್ನೆಗೆ ” ನಾನೂ ಒಬ್ಬ ಆಮ್ ಆದ್ಮಿ ಅಂದರೆ ಜನ ಸಾಮಾನ್ಯ ಜನಸಾಮಾನ್ಯರಿಗೆ ಯಾರು ಒಳ್ಳೆಯದನ್ನು ಮಾಡುತ್ತಾರೋ ಅವರ ಜೊತೆ ನಾನು ಸದಾ ಇರುತ್ತೇನೆ, ” ಎಂದು ಮಾರ್ಮಿಕವಾಗಿ ಉತ್ತರಿಸಿದರು.

ಬೆಂಗಳೂರಿನ ಶಾಂತಿನಗರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸೇರಿ ಪ್ರಾರಂಭಿಸಿರುವ ಈ ದೆಹಲಿ ಮಾದರಿಯ ಮೊಹಲ್ಲಾ ಕ್ಲಿನಿಕ್ ಮಾದರಿ ನೋಡಿ ನನಗೆ ಅಪಾರ ಸಂತೋಷವನ್ನುಂಟು ಮಾಡಿದೆ. ಯಾವುದೇ ರೀತಿಯ ಅಂತಸ್ತು, ಆದಾಯ, ಜಾತಿ ಕೇಳದೆ ಎಲ್ಲರಿಗೂ ಈ ಸೌಲಭ್ಯ ವಿಸ್ತರಿಸಿರುವುದು ನನಗೆ ಮೆಚ್ಚುಗೆಯಾದ ಅಂಶಗಳಲ್ಲಿ ಒಂದು ಎಂದರು.

ಕೊರೋನಾ ಸಂಕಷ್ಟದ ನಂತರ ಸಣ್ಣ ಪುಟ್ಟ ಖಾಯಿಲೆಗಳಿಗೂ ಮಾತ್ರೆ ತೆಗೆದುಕೊಳ್ಳಲು ಜನಸಾಮಾನ್ಯ ಕಷ್ಟಪಡುತ್ತಿದ್ದಾನೆ. ಆಮ್ ಆದ್ಮಿ ಕ್ಲಿನಿಕ್‌ ಒಳಗೆ ಬಂದರೆ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳೇ ಇದ್ದಾರೆ, ಇವರೆಲ್ಲ ಮನೆಗೆಲಸಕ್ಕೆ ಹೋಗುವಂತಹ ಹೆಣ್ಣುಮಕ್ಕಳು ಇಂತಹ ಕಟ್ಟ ಕಡೆಯ ಜನರ ಸೇವೆಗೆ ನಿಂತಿರುವ ಆಮ್ ಆದ್ಮಿಗಳಿಗೆ ವಂದನೆಗಳನ್ನು ತಿಳಿಸಿದರು.

ಆನಂತರ ಆಮ್ ಆದ್ಮಿ ಕ್ಲಿನಿಕ್‌ಗೆ ಬಂದಂತಹ ರೋಗಿಗಳ ಕುಶಲೋಪರಿ ವಿಚಾರಿಸಿದರು. ಈ ವೇಳೆ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ರಾಜ್ಯ ಕಾರ್ಯದರ್ಶಿ ಸಂಚಿತ್ ಸಹಾನಿ, ಹಿರಿಯ ಮುಖಂಡರಾದ ಗೋಪಾಲ್ ರೆಡ್ಡಿ, ಹರಿಹರನ್, ರೇಣುಕಾ ವಿಶ್ವನಾಥನ್, ಜಂಟಿ ಕಾರ್ಯದರ್ಶಿ ದರ್ಶನ್, ಮುಖ್ಯ ವಕ್ತಾರ ಶರತ್ ಖಾದ್ರಿ, ಉಪಾಧ್ಯಕ್ಷ ಸುರೇಶ್ ರಾಥೋಡ್ ಉಪಸ್ಥಿತರಿದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

3 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

3 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

3 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

3 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

4 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

4 hours ago