ಬೆಂಗಳೂರು: ಬಿಜೆಪಿ ಸರಕಾರವು ಕುತಂತ್ರ ರಾಜಕಾರಣದ ಮೂಲಕ ಮಹಿಳಾ ಶಾಸಕಿ ಸೌಮ್ಯರೆಡ್ಡಿ ಅವರ ಮೇಲೆ ಸುಳ್ಳು ದೂರನ್ನು ದಾಖಲಿಸಿ ಎಫ್ಐಆರ್ ದಾಖಲಿಸಿರುವುದನ್ನು ಕರ್ನಾಟಕ ರೆಡ್ಡಿ ಜನ ಸಂಘ ತೀವ್ರವಾಗಿ ಖಂಡಿಸಿದೆ.
ರೈತರ ಹೋರಾಟದ ಸಂಧರ್ಭದಲ್ಲಿ ನಡೆದ ತಳ್ಳಾಟದಲ್ಲಿ ಮಹಿಳಾ ಶಾಸಕಿ ಸೌಮ್ಯರೆಡ್ಡಿ ಅವರು ಮತ್ತು ಇತರ ಶಾಸಕರು ಪ್ರತಿಭಟನೆಯಲ್ಲಿ ಮುನ್ನಡೆಯುತ್ತಿದ್ದಾಗ ಮಹಿಳಾ ಪೊಲೀಸ್ ಪೇದೆಗಳು ಹಾಗೂ ಇತರ ಪೊಲೀಸ್ ಸಿಬ್ಬಂದಿ ಅತ್ಯಂತ ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ.
ಅವರನ್ನು ನೆಲಕ್ಕೆ ತಳ್ಳಿ ಎಳೆದಾಡಿ ಅವಮಾನಿಸಿರುವ ಚಿತ್ರಗಳು ಲಭ್ಯವಿದ್ದರೂ ಸಂಬಂಧಪಟ್ಟ ಅಧಿಕಾರಿಯ ಮೇಲೆ ಯಾವುದೇ ಕ್ರಮ ಜರುಗಿಸಿಲ್ಲ. ಅಲ್ಲದೆ, ಹೋರಾಟ ನಡೆದ 2 ದಿನಗಳ ನಂತರ ಎಫ್ಐಆರ್ ದಾಖಲಿಸಿ ಕುತಂತ್ರ ರಾಜಕಾರಣ ಮಾಡುವ ಮೂಲಕ ಮಹಿಳಾ ಶಾಸಕಿಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಸುಳ್ಳ ಎಫ್ಐಆರ್ ದಾಖಲಿಸಲಾಗಿರುವುದು ಸರಿಯಲ್ಲ ಎಂದು ಕರ್ನಾಟಕ ರೆಡ್ಡಿ ಜನ ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣಾ ರೆಡ್ಡಿ ಕೆ.ಎನ್ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಈ ಸುಳ್ಳು ಎಫ್ಐಆರ್ ದಾಖಲಿಸಿರುವುದನ್ನು ಕೂಡಲೇ ರದ್ದುಗೊಳಿಸಬೇಕು ಹಾಗೂ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಘಟನೆಗೆ ಕಾರಣರಾದ ಪೊಲೀಸ್ ಸಿಬ್ಬಂದಿ ಮತ್ತು ಇತರರ ಮೇಲೆ ಕ್ರಮ ಜರುಗಿಸಬೇಕೆಂದು ಗೃಹ ಸಚಿವರು ಮತ್ತು ಮಾನ್ಯ ಮುಖ್ಯಮಂತ್ರಿಗಳಲ್ಲಿ ಕರ್ನಾಟಕ ರೆಡ್ಡಿ ಜನಸಂಘ ಆಗ್ರಹಿಸಿದೆ.
ಈ ಕೂಡಲೇ ಈ ಬಗ್ಗೆ ಸೂಕ್ತ ಆದೇಶ ಹೊರಡಿಸಿ ನ್ಯಾಯ ದೊರಕಿಸಿಕೊಡಬೇಕೆಂದು ಕೋರುತ್ತೇವೆ. ತಪ್ಪಿದಲ್ಲ ಕರ್ನಾಟಕ ರೆಡ್ಡಿ ಜನಸಂಘ ರಾಜ್ಯಾದ್ಯಂತ ತೀವ್ರತರವಾದ ಹೋರಾಟವನ್ನು ಹಮ್ಮಿಕೊಳ್ಳಲಿದೆ ಎಂದು ಕರ್ನಾಟಕ ರೆಡ್ಡಿ ಜನ ಸಂಘದ ಅಧ್ಯಕ್ಷರಾದ ಎಸ್. ಜಯರಾಮ್ ರೆಡ್ಡಿ, ಉಪಾಧ್ಯಕ್ಷರುಗಳಾದ ವಿ ವೆಂಕಟಶಿವಾರೆಡ್ಡಿ, ಎ.ಆರ್ ಶಿವರಾಮ್ ಹಾಗೂ ಎಲ್ಲಾ ಆಡಳಿತ ಮಂಡಳಿ ಸದಸ್ಯರು ಎಚ್ಚರಿಕೆಯನ್ನು ನೀಡಿದ್ದಾರೆ.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…