ಸುರಪುರ: ೧೮ ವರ್ಷ ತುಂಬಿದ ಪ್ರತಿಯೊಬ್ಬರು ಮತದಾನ ಮಾಡಬೇಕು,ಮತದಾನ ಎಂಬುದು ದೇಶದ ಅಭಿವೃಧ್ಧಿಯಲ್ಲಿ ಮಹತ್ತರ ಪಾತ್ರ ವಹಿಸಲಿದೆ ಎಂದು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿದರು.
ನಗರದ ದರಬಾರ ಶಾಲೆಯಲ್ಲಿ ಚುನಾವಣಾ ಆಯೋಗ ಮತ್ತು ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಮತದಾರ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ಮತದಾನ ಎಂಬುದು ಸಂವಿಧಾನ ನಮಗೆ ನೀಡುವ ದೊಡ್ಡ ಉಡುಗೊರೆಯಾಗಿದೆ,ಆದ್ದರಿಂದ ಪ್ರತಿಯೊಬ್ಬರು ಈ ವರವನ್ನು ಪಡೆದುಕೊಂಡು ಮತವೆಂಬ ತಮ್ಮ ಹಕ್ಕನ್ನು ಚಲಾಯಿಸುವಂತೆ ಕರೆ ನೀಡಿದರು.೧೮ ವರ್ಷ ವಯಸ್ಸಾದವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆಗೊಳಿಸಿಕೊಳ್ಳಬೇಕು ಮತ್ತು ಪ್ರತಿ ಚುನಾವಣೆಯಲ್ಲಿ ತಪ್ಪದೆ ಮತದಾನ ಮಾಡಬೇಕೆಂದು ಕರೆ ನೀಡಿದರು.
ನಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಂಬ್ರೇಶ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವರಡ್ಡಿ ಕ್ಷೇತ್ರ ಮತದಾರ ದಿನವನ್ನು ಕುರಿತು ಮಾತನಾಡಿದರು,ನಂತರ ಬಿಆರ್ಸಿ ಹಣಮಂತ್ರಾಯ ಪೂಜಾರಿ ಎಲ್ಲರಿಗು ಮತದಾನದ ಕುರಿತು ಪ್ರಮಾಣ ವಚನ ಬೋಧಿಸಿದರು.ನಂತರ ಅನೇಕ ಜನ ಯುವ ಮತದಾರರಿಗೆ ಚುನಾವಣಾ ಆಯೋಗದ ವತಿಯಿಂದ ಚುನಾವಣಾ ಗುರುತಿನ ಚೀಟಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲಾಧಿಕಾರಿ ಅಮರೇಶ ಕುಂಬಾರ ಅಕ್ಷರದಾಸೋಹ ಸಹಾಯಕ ನಿರ್ದೇಶಕ ಮೌನೇಶ ಕಂಬಾರ ಚುನಾವಣಾ ವಿಭಾಗದ ಸಿರಸ್ತೇದಾರ ಅಶೋಕ ಸುರಪುರಕರ್ ಕಂದಾಯ ನಿರೀಕ್ಷಕ ಗುರುಬಸಪ್ಪ ಶಿಕ್ಷಕ ಸೋಮರಡ್ಡಿ ಮಂಗಿಹಾಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…