ಜೆಸ್ಕಾಂ ನಿಗಮದ ಕಚೇರಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

0
27

ಕಲಬುರಗಿ: ಭಾರತದ 72ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ರಾಹುಲ್ ತುಕಾರಾಂ ಪಾಂಡ್ವೆ ಅವರು ಮಂಗಳವಾರ ನಿಗಮದ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಜೆಸ್ಕಾಂ ತಾಂತ್ರಿಕ ನಿರ್ದೇಶಕ ಆರ್. ಜಯಕುಮಾರ್, ಮುಖ್ಯ ಇಂಜನಿಯರ್‍ಗಳಾದ ಲಕ್ಷ್ಮಣ ಚವ್ಹಾಣ ಮತ್ತು ಆರ್.ಡಿ. ಚಂದ್ರಶೇಖರ, ಪ್ರಧಾನ ವ್ಯವಸ್ಥಾಪಕ (ಮಾನವ ಸಂಪನ್ಮೂಲ ಅಭಿವೃದ್ಧಿ) ರಾದ ಎಂ.ಕೆ. ಪ್ರಮೀಳಾ, ಇತರೆ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ನೌಕರ ಸಂಘದ ಪದಾಧಿಕಾರಿಗಳು, ಜೆಸ್ಕಾಂ ಹಿರಿಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Contact Your\'s Advertisement; 9902492681

ನಂತರ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ರಾಹುಲ್ ತುಕಾರಾಂ ಪಾಂಡ್ವೆ ಅವರು ಜೆಸ್ಕಾಂ ನಿಗಮ ಕಚೇರಿ ಆವರಣದಲ್ಲಿ ಕನ್ನಡ ಸಂಘದ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕನ್ನಡ ಸಂಘದ ಅಧ್ಯಕ್ಷ ಎಂ. ಈರಣ್ಣ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here