ಕೊನೆ ಭಾಗದ ರೈತರಿಗೆ ನೀರು ಕೊಡಲು ಆಗ್ರಹಿಸಿ ಯುವ ಒಕ್ಕೂಟ ಪ್ರತಿಭಟನೆ

0
18

ಸುರಪುರ: ರೈತರ ನೀರಾವರಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ನಿಖಿಲ ಕುಮಾರಸ್ವಾಮಿ ಪ್ರಜ್ವಲ್ ರೇವಣ್ಣ ಯುವ ಒಕ್ಕೂಟದ ವತಿಯಿಂದ ನಗರದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ,ಕೆಬಿಜೆಎನ್‌ಎಲ್ ವ್ಯಾಪ್ತಿಯ ಸುಮಾರು ೧೨ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಲುವೆಗಳ ರಿಪೇರಿ ಮಾಡಿಲ್ಲ,ಅಲ್ಲದೆ ಭೀಮರಾಯನಗುಡಿ ಕೆಬಿಜೆಎನ್‌ಎಲ್ ಅಧಿಕಾರಿಗಳು ವ್ಯಾಪಕ ಭ್ರಷ್ಟಾಚಾರ ಮಾಡಿದ್ದಾರೆ.

Contact Your\'s Advertisement; 9902492681

ಇವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗು ಸುರಪುರ ತಾಲೂಕಿನ ಕೊನೆ ಭಾಗದ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ ರೈತರಿಗೆ ನೀರು ತಲುಪುವಂತೆ ಕಾಲುವೆಗಳ ದುರಸ್ಥಿಗೊಳಿಸಬೇಕು ಇಲ್ಲವಾದಲ್ಲಿ ಡಿವಿಜೆನ್ ಸಂಖ್ಯೆ ೧೦ ಕಚೇರಿ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿ ನಂತರ ನೀರಾವರಿ ಸಚಿವರಿಗೆ ಬರೆದ ಮನವಿಯನ್ನು ತಹಸೀಲ್ ಸಿರಸ್ತೆದಾರ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಉಸ್ತಾದ ವಜಾಹತ್ ಹುಸೇನ್ ಗೋಪಾಲ ಬಾಗಲಕೋಟೆ ಮಾನಯ್ಯ ದೊರೆ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here