ಸುರಪುರ: ರೈತರ ನೀರಾವರಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ನಿಖಿಲ ಕುಮಾರಸ್ವಾಮಿ ಪ್ರಜ್ವಲ್ ರೇವಣ್ಣ ಯುವ ಒಕ್ಕೂಟದ ವತಿಯಿಂದ ನಗರದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ,ಕೆಬಿಜೆಎನ್ಎಲ್ ವ್ಯಾಪ್ತಿಯ ಸುಮಾರು ೧೨ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಲುವೆಗಳ ರಿಪೇರಿ ಮಾಡಿಲ್ಲ,ಅಲ್ಲದೆ ಭೀಮರಾಯನಗುಡಿ ಕೆಬಿಜೆಎನ್ಎಲ್ ಅಧಿಕಾರಿಗಳು ವ್ಯಾಪಕ ಭ್ರಷ್ಟಾಚಾರ ಮಾಡಿದ್ದಾರೆ.
ಇವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗು ಸುರಪುರ ತಾಲೂಕಿನ ಕೊನೆ ಭಾಗದ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ ರೈತರಿಗೆ ನೀರು ತಲುಪುವಂತೆ ಕಾಲುವೆಗಳ ದುರಸ್ಥಿಗೊಳಿಸಬೇಕು ಇಲ್ಲವಾದಲ್ಲಿ ಡಿವಿಜೆನ್ ಸಂಖ್ಯೆ ೧೦ ಕಚೇರಿ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿ ನಂತರ ನೀರಾವರಿ ಸಚಿವರಿಗೆ ಬರೆದ ಮನವಿಯನ್ನು ತಹಸೀಲ್ ಸಿರಸ್ತೆದಾರ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಉಸ್ತಾದ ವಜಾಹತ್ ಹುಸೇನ್ ಗೋಪಾಲ ಬಾಗಲಕೋಟೆ ಮಾನಯ್ಯ ದೊರೆ ಇತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…