ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರಕ್ಕೂ ನನಗೂ ಸಂಬಂಧವಿಲ್ಲ: ಸಿಂಪಿ

0
62

ಕಲಬುರಗಿ: ಕಳೆದ ವರ್ಷ ಫೆ.5, 6 ಮತ್ತು 7 ರಂದು ನಗರದಲ್ಲಿ ನಡೆದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೀರಭದ್ರ ಸಿಂಪಿ ಹೇಳಿದರು.

ಕನ್ನಡ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನ ನಡೆಸಲು ಸರ್ಕಾರ ಜಿಲ್ಲಾಡಳಿತಕ್ಕೆ ಹಣ ನೀಡಿದೆ. ಹೀಗಾಗಿ ಜಿಲ್ಲಾಡಳಿತವೇ ಲೆಕ್ಕಪತ್ರ ನೀಡಬೇಕು, ಇದರಲ್ಲಿ ನನ್ನ ಪಾತ್ರವೇನೂ ಇಲ್ಲ ಎಂದು ಸ್ಪಷ್ಟಪಡಿಸಿದರು.

Contact Your\'s Advertisement; 9902492681

ಸಮ್ಮೇಳನಕ್ಕೆ ಅನುದಾನ ತಡವಾಗಿ ಬಂದಿರುವುದು ಮತ್ತು ಕೊರೊನಾ ಕಾರಣದಿಂದಾಗಿ ಲೆಕ್ಕಪತ್ರ ನೀಡುವುದು ವಿಳಂಬವಾಗಿರಬದು ಎಂದ ಅವರು ಸಮ್ಮೇಳನದ ಖರ್ಚುವೆಚ್ಚದ ಲೆಕ್ಕಪತ್ರಕ್ಕೂ ತಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here