ಯಾದಗಿರಿ: ಸುರಪುರ ನಗರದ ದೀವಳಗುಡ್ಡದಲ್ಲಿ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಸಾವನ್ನಪ್ಪಿರುವ ಘಟನೆ ಬೆಳಗಿನ ಜಾವ ನಡೆದಿದೆ.
ನಗರದ ಮುಲ್ಲಾ ಮೊಹಲ್ಲಾದ ವ್ಯಕ್ತಿ ಮಕ್ಬುಲ್ ಅಲಿ (48), ಸಿವಿಲ್ ಇಂಜಿನಿಯರಾಗಿ ಗುತ್ತಿಗೆ ಪಡೆದು ಮನೆಗಳನ್ನು ಕಟ್ಟಿಸಿ ಕೊಡುವ ಕೆಲಸ ಮಾಡುತ್ತಿದ್ದ. ವ್ಯಕ್ತಿ ಮಕ್ಬುಲ್ ಅಲಿ ಬೆಳಿಗ್ಗೆ ನಮಾಜ್ ಮುಗಿಸಿ ನಂತರ ತಾನು ಗುತ್ತಿಗೆ ಪಡೆದು ಮನೆ ನಿರ್ಮಿಸುತ್ತಿದ್ದ ದೀವಳಗುಡ್ಡದಲ್ಲಿನ ನಿರ್ಮಾಣ ಹಂತದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.
ಈ ಕುರಿತು ಮೃತನ ಪತ್ನಿ ಜವ್ವಾರ್ ಜಬೀನ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು,ನನ್ನ ಗಂಡನಿಗೆ ಯಾರೋ ಹಣ ನೀಡುವಂತೆ ಮನೆಗೆ ಬಂದು ತೊಂದರೆ ನೀಡುತ್ತಿದ್ದರು. ಈಗ್ಗೆ ಎರಡು ದಿನಗಳಿಂದ ಮಾನಸಿಕವಾಗಿ ಕುಗ್ಗಿದ್ದನು,ನಾನು ಏಕೆ ಏನಾಗಿದೆ ಎಂದು ಕೇಳಿದರು ಏನು ಹೇಳದೆ ಇದ್ದರು. ಮಾನಸಿಕವಾಗಿ ನೊಂದಿದ್ದ ನನ್ನ ಪತಿಯು ಗುರುವಾರ ಬೆಳಿಗ್ಗೆ ನಮಾಜ್ ಮುಗಿಸಿಕೊಂಡು ದೀವಳಗುಡ್ಡದಲ್ಲಿ ಕಟ್ಟಿಸಿ ಕೊಡಲು ಕೆಲಸ ನಡೆದಿದ್ದ ಮನೆಯಲ್ಲಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದು,ನನ್ನ ಗಂಡನಿಗೆ ಹಣಕ್ಕಾಗಿ ಕಿರುಕುಳ ನೀಡಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ದೂರು ಸಲ್ಲಿದ್ದಾರೆ.
ಘಟನಾ ಸ್ಥಳಕ್ಕೆ ಸುರಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದು,ಆತ್ಮಹತ್ಯೆಗೆ ನಿಖರ ಕಾರಣ ಪೊಲೀಸರ ತನಿಖೆಯಿಂದಷ್ಟೆ ತಿಳಿದುಬರಬೇಕಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮಂಡಳಿ ಪಣ ತೊಟ್ಟಿದ್ದು, ಬರುವಂತಹ…
ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…
ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…
ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…
ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…
ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…