ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿಯಿಂದ ಎಂ. ಚಂದ್ರಶೇಖರ್ ಗೆ ಸನ್ಮಾನ

ಮೈಸೂರು: ಇಂದು ನಗರದ ಅಗ್ರಹಾರದ ವೃತ್ತದ ಬಳಿ ಇರುವ ಗಣಪತಿ ದೇವಸ್ಥಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ಎಂ.ಚಂದ್ರಶೇಖರ್ ರವರ ಹುಟ್ಟು ಹಬ್ಬದ ಸಲುವಾಗಿ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿಯ ವತಿಯಿಂದ ದೇವರಿಗೆ ಪೂಜೆ ಸಲ್ಲಿಸಿ ,ಅಭಿನಂದಿಸಿ ಸಿಹಿ ವಿತರಣೆ ಮಾಡಲಾಯಿತು.

ಎಂ.ಚಂದ್ರಶೇಖರ್ ರವರು 1989 ರಲ್ಲಿ ಕನ್ನಡ ಸಾಹಿತ್ಯ ಕಲಾ ಕೂಟದ ಮೂಲಕ ಸಾಹಿತ್ಯ,ಸಾಂಸ್ಕೃತಿಕ, ಹೋರಾಟಕ್ಕೆ ಪಾದಾರ್ಪಣೆ ಗೊಂಡರು,ಅಂದಿನಿಂದ ಇಂದಿನವರೆಗೂ ನಿರಂತರವಾಗಿ ಕನ್ನಡ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಗಿ 400 ಕ್ಕೂ ಹೆಚ್ಚು ಕಾರ್ಯಕ್ರಮ,8 ತಾಲ್ಲೂಕು,5 ಜಿಲ್ಲಾ ಸಮ್ಮೇಳನವನ್ನು ಯಶಸ್ವಿಯಾಗಿ ನೆಡಸಿ ಮೈಸೂರು ಬಸವಕೇಂದ್ರದಲ್ಲಿ 200 ಕ್ಕೂ ಹೆಚ್ಚು ಶರಣ ಸಂಗಮ ಸಂಘಟಿಸಿದ್ದಾರೆ,ಪ್ರಸ್ತುತ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಗ್ರಾಮ, ಗ್ರಾಮಗಳಿಗೆ ಶರಣರ ಬದುಕು ,ವಚನಗಳನ್ನು ವಿಸ್ತರಿಸಿದ್ದಾರೆ.

ಕವಿಯಾಗಿ,ಲೇಖಕರಾಗಿ,ಸಂಘಟಕರಾಗಿ,ಹೋರಾಟಗಾರರಾಗಿ 30 ವರ್ಷಗಳು ನಿರಂತರವಾಗಿ ತೊಡಗಿಸಿಕೊಂಡು ಮೈಸೂರು ನಗರ ಕನ್ನಡ ಜಾಗೃತ ಸಮಿತಿ ಸದಸ್ಯರಾಗಿ ನಗರಾದಾದ್ಯಂತ ಕನ್ನಡ ನಾಮಫಲಕ, ಕಚೇರಿಯಲ್ಲಿ ಕನ್ನಡದಲ್ಲಿ ವ್ಯವಹರಿಸುವಂತೆ ಎಚ್ಚರಿಕೆ ಕೆಲಸ ಮಾಡುವ ಮೂಲಕ ಬಿಂಬಿಸಿಕೊಂಡಿದ್ದಾರೆ, ಅರಸು ಪ್ರತಿಮೆ ಪ್ರತಸ್ಥಾಪನ ಸಮಿತಿಯ ಗೌರವ ಅಧ್ಯಕ್ಷರಾಗಿ ಮೈಸೂರಿನ ಹೃದಯ ಭಾಗದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಪ್ರತಿಮೆ ಮಾಡುವಂತೆ ನಿರಂತರ ಹೋರಾಟ ನೆಡೆಸುತ್ತಿದ್ದಾರೆ,ಇದೀಗ 55 ವರ್ಷಗಳ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಚಂದ್ರಶೇಖರ್ ರವರಿಗೆ ಅವರ ಹೋರಾಟದ ಸಂಘಟನೆ ಶಕ್ತಿ ಇನ್ನಷ್ಟು ವೃದ್ಧಿಸಲಿ ಎಂದು ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿಯ ಪರವಾಗಿ ಶುಭ ಕೊರಲಾಯಿತು.

ಈ ಸಂದರ್ಭದಲ್ಲಿ ಕ.ಸಾ.ಪ.ಮಾಜಿ ಅಧ್ಯಕ್ಷರಾದ ಶ್ರೀ ಮಡ್ದಿಕೆರೆ ಗೋಪಾಲ್, ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ ಅಧ್ಯಕ್ಷರಾದ ಜಾಕೀರ್ ಹುಸೇನ್, ರಾಜ್ಯ ಪ್ರಧಾನ ಸಂಚಾಲಕರಾದ ಡೈರಿ ವೆಂಕಟೇಶ್, ಜಿಲ್ಲಾ ನಗರ ಪ್ರಧಾನ ಸಂಚಾಲಕ ಎ. ಹೆಚ್.ಕೃಷ್ಣೇಗೌಡ, ಕನ್ನಡ ಚಳುವಳಿ ಹೋರಾಟಗಾರರಾದ ಶಿವಶಂಕರ್ ಉಪಸ್ಥಿತರಿದ್ದರು.

emedialine

Recent Posts

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

5 mins ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

8 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

13 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ್ಲ –ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

18 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

23 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420