ಕಲಬುರಗಿ: ನಗರದ ಭಾರತಿಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ನಗರ ಜಿಲ್ಲೆ ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ಅರವಿಂದ್ ಎಮ್ ಪೋದ್ದಾರ ಅವರು ನಗರಕ್ಕೆ ಆಗಮಿಸಿದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ರಾಜ್ಯ ಅಧ್ಯಕ್ಷ ಆರ್ ರಘು ಕೌಟೀಲ ಅವರಿಗೆ ಸನ್ಮಾನಿಸಿದರು.
ಸನ್ಮಾನಸ್ವಿಕರಿಸಿ ಮಾತನಾಡುತ್ತಾ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ದಿಂದ ಗಂಗಾ ಕಲ್ಯಾಣ ಯೋಜನೆ, ಸಾಂಪ್ರದಾಯಿಕ ವ್ರತ್ತಿ, ಶಿಕ್ಷಣ ಸಾಲ ಸೌಲಭ್ಯ, ಇನ್ನೂ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಅವುಗಳನ್ನು ಹಿಂದುಳಿದ ವರ್ಗಗಳ ಮತ್ತು ಓಬಿಸಿ ಮೋರ್ಚಾ ಮುಖಂಡರು ಸಂಘಟಿತರಾಗಿ ಯೋಜನೆಯ ಉಪಯೋಗ ಪಡೆದು ಕೋಳ್ಳಬೇಕೆಂದು ಹೇಳಿದರು.
ಅರವಿಂದ್ ಎಮ್ ಪೋದ್ದಾರ ಎಲ್ಲರನ್ನೂ ಸ್ವಾಗತಿಸಿ ಮಾತನಾಡುತ್ತಾ ನಿಗಮದಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಿಇಟಿ ಇದ್ದವರಿಗೆ ಮಾತ್ರ ಸಾಲ ಸೌಲಭ್ಯ ಸಿಗುವ ವ್ಯವಸ್ಥೆ ತೆಗೆದು ಹಿಂದುಳಿದ ವರ್ಗಗಳ ಗ್ರಾಮಾಂತರ, ಬಡ ವಿದ್ಯಾರ್ಥಿಗಳಿಗೆ ಎಲ್ಲರಿಗೂ ಸಾಲ ಸೌಲಭ್ಯ ಸಿಗುವ ವ್ಯವಸ್ಥೆ ಆಗಬೇಕು ಅಂದಾಗ ಮಾತ್ರ ಹಿಂದುಳಿದ ವಿದ್ಯಾರ್ಥಿಗಳು ಶಿಕ್ಷಣ ದಿಂದ ಮುಂದು ವರಿಯಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಪ್ರ, ಕಾರ್ಯದರ್ಶಿ ಸಂತೋಷ್ ಮದನೆ, ಶ್ರೀಕಾಂತ ಆಲೂರ, ಗ್ರಾಮಾಂತರ ಜಿಲ್ಲಾ ಬಿಜೆಪಿ ಓಬಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಎಮ್ಮಿಗನೂರ, ರಾಜ್ಯ ಕಾರ್ಯಕಾರಣಿ ಸದಸ್ಯ ಅಂಬು ಡಿಗ್ಗಿ , ಬಿಜೆಪಿ ಜಿಲ್ಲಾ ವಕ್ತಾರ ಸಾಹೇಬ್ ಗೌಡ ಪಾಟೀಲ್, ಸಹ ವಕ್ತಾರ ದಿಲೀಪ್ , ಉತ್ತರ ಮಂಡಲ ಅಧ್ಯಕ್ಷ ವಿಜಯ ಕೋಂಡಪಳ್ಳಿ, ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಗುತ್ತೇದಾರ್, ಬಾಬುರಾವ್ ಹಾಗರಗುಂಡಗಿ, ಜಯಪ್ಪ ಬಡಿಗೇರ ಖಜಾಂಚಿ, ರವಿ ಅಗಸರ, ನಾಗರಾಜ್ ಪತ್ತಾರ, ಪ್ರಶಾಂತ್ ನಿಂಬಾಳ್ಕರ್, ಸಂತೋಷ್ ಜಾಧವ್, ಅಭಯ್,ಶರಣು ಸುರ್ಯವಂಶಿ, ಅಭಿಷೇಕ್, ಭೀಮಾಶಂಕರ ಪೂಜಾರಿ, ಅಶೋಕ್ ಮಾನೆ, ಶ್ರೀಮಂತ ಮಡಿವಾಳ, ಬಸವರಾಜ ಮ, ಕಿಷ್ಣಾ ಮಾಡ್ಯಳ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…