ಕಲಬುರಗಿ : ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯನುಸಾರ ಪ್ರದರ್ಶಕ ಕಲೆಗಳಿಗೆ ಹೆಚ್ಚಿನ ಮಹತ್ವದೊರೆಯಲಿದೆ ಎಂದು ಮೈಸೂರಿನ ಡಾ. ಗಂಗೂಬಾಯಿ ಹಾನಗಲ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಗಿರೀಶ ಬೆಟ್ಟಕೋಟೆ ಹೇಳಿದರು.
ಕಲಬುರಗಿ ರಂಗಾಯಣ ಆಯೋಜಿಸಿದ್ದ ರಂಗತರಬೇತಿ ಶಿಬಿರದಲ್ಲಿ ಸಿದ್ಧಪಡಿಸಿದ ಮೋಹಪುರ ನಾಟಕದಪ್ರದರ್ಶನಕ್ಕೆಚಾಲನೆ ನೀಡಿ ಮಾತನಾಡಿದ ಅವರು, ರಂಗ ಶಿಕ್ಷಣದಿಂದ ವ್ಯಕ್ತಿಗಳ ಮನೋಬಲ ಹೆಚ್ಚಳವಾಗುತ್ತದೆ. ಕಲಬುರಗಿ ರಂಗಾಯಣದಿಂದ ರಂಗ ಶಿಕ್ಷಣ ಕೋರ್ಸ್ ಆರಂಭಿಸುವುದಾದರೆ, ಅದಕ್ಕೆ ವಿಶ್ವವಿದ್ಯಾಲಯದಿಂದ ಮಾನ್ಯತೆನೀಡಲಾಗುವುದು ಎಂದು ಹೇಳಿದರು.
ರಂಗಾಯಣದ ನಿರ್ದೇಶಕ ಪ್ರಭಾಕರ ಜೋಶಿ ಅಧ್ಯಕ್ಷತೆ ವಹಿಸಿದ್ದರು. ರಾಯಚೂರು ಜಿಲ್ಲೆಯ ಕನ್ನಡ ಸಾಹಿತ್ಯಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮನೋಹರಮಸ್ಕಿ, ಮಸ್ಕಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಂಕರಗೌಡ ಪಾಟೀಲ, ಹಿರಿಯ ಸಾಹಿತಿ ಗುಂಡೂರಾವ ದೇಸಾಯಿ, ರಂಗನಿರ್ದೇಶಕರಾದ ವಿಶ್ವರಾಜ ಪಾಟೀಲ, ಶಾಂತವೀರಯ್ಯ ಮಠಪತಿ, ರಂಜಾನಸಾಬ ಉಳ್ಳಾಗಡ್ಡಿ, ಮಲ್ಲಿಕಾರ್ಜುನ ದೊಡ್ಡಮನಿ ಇತರರು ಉಪಸ್ಥಿತರಿದ್ದರು.
ಮೋಹಪುರ ನಾಟಕ ಪ್ರದರ್ಶನ: ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸರ್ಕಾರಿ ನೌಕರರ ಸಂಘಪ್ರಸ್ತುತಪಡಿಸಿದಪ್ರಭಾಕರ ಜೋಶಿ ರಚಿಸಿದ ಕಾದಂಬರಿ ಆಧಾರಿತಮೋಹಪುರ ನಾಟಕವನ್ನು ರಂಜಾನ ಸಾಬ ಉಳ್ಳಾಗಡ್ಡಿ ನಿರ್ದೇಶನದಲ್ಲಿ ಪ್ರದರ್ಶಿಸಲಾಯಿತು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…