ಸುರಪುರ: ತಾಲೂಕಿನ ಹಂದ್ರಾಳ ಎಸ್.ಡಿ ಗ್ರಾಮದಲ್ಲಿ ಕಳೆದ ೧೧ನೇ ತಾರೀಖು ದಲಿತ ಸಮುದಾಯದ ಪರಮಣ್ಣ ಎಂಬುವವರ ಮೇಲೆ ಸವರ್ಣಿಯರು ಹಲ್ಲೆ ಮಾಡಿದ್ದಾರೆ,ದೂರನ್ನು ಕೂಡ ದಾಖಲಿಸಲಾಗಿದ್ದು ಇದುವರೆಗೂ ಆರೋಪಿಗಳನ್ನು ಪೊಲೀಸರು ಬಂಧಿಸದಿರುವುದು ಖಂಡನಿಯ ಎಂದು ದಲಿತ ಸೇನೆ ಜಿಲ್ಲಾಧ್ಯಕ್ಷ ಅಶೋಕ ಹೊಸ್ಮನಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಪೊಲೀಸ್ ಠಾಣೆ ಮುಂದೆ ಧರಣಿ ನಡೆಸಿ ಮಾತನಾಡಿ,ಕೂಡಲೆ ಹಲ್ಲೆ ಮಾಡಿದವರು ಬಂಧಿಸಬೇಕು ಎಂದು ಆಗ್ರಹಿಸಿದರು.ಅಲ್ಲದೆ ಹಲ್ಲೆಗೊಳಗಾದ ಪರಮಣ್ಣನ ಮೇಲೆಯೆ ಪ್ರತಿ ದೂರು ದಾಖಲಿಸಲಾಗಿದೆ,ಆ ದೂರನ್ನು ರದ್ದು ಮಾಡಬೇಕೆಂದು ಆಗ್ರಹಿಸಿದರು.
ಧರಣಿಯಲ್ಲಿ ಸೇನೆಯ ತಾಲೂಕು ಅಧ್ಯಕ್ಷ ನಿಂಗಣ್ಣ ಗೋನಾಲ ಮಾತನಾಡಿ,ಘಟನೆ ನಡೆದು ೧೭ ದಿನವಾದರು ಆರೋಪಿಗಳನ್ನು ಬಂಧಿಸದೆ ಬಿಟ್ಟಿರುವುದು ಯಾವ ಕಾರಣಕ್ಕೆ ಎಂದು ಪ್ರಶ್ನಿಸಿದರು.ನಂತರ ಘಟನಾ ಸ್ಥಳಕ್ಕೆ ಗ್ರೇಡ-೨ ತಹಸೀಲ್ದಾರ್ ಸೂಫಿಯಾ ಸುಲ್ತಾನ ಹಾಗು ಡಿವೈಎಸ್ಪಿ ವೆಂಕಟೇಶ ಹುಗಿಬಂಡಿ ಆಗಮಿಸಿ ಧರಣಿ ನಿರತರ ಮನವಿಯನ್ನು ಆಲಿಸಿದರು.
ಈ ಸಂದರ್ಭದಲ್ಲಿ ಡಿವೈಎಸ್ಪಿ ವೆಂಕಟೇಶ ಹುಗಿಬಂಡಿಯವರು ಮಾತನಾಡಿ,ಇನ್ನೂ ನಾಲ್ಕೈದು ದಿನಗಳಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು, ಅದರ ಬಗ್ಗೆ ಯಾವುದೇ ಅನುಮಾನ ಬೇಡ.ಆದ್ದರಿಂದ ತಾವು ಧರಣಿಯನ್ನು ಕೈಬಿಡುವಂತೆ ತಿಳಿಸಿದರು.
ಡಿವೈಎಸ್ಪಿಯವರ ಹೇಳಿಕೆಗೆ ಒಪ್ಪಿದ ಧರಣಿ ನಿರತರು ನಾಲ್ಕೈದು ದಿನಗಳಲ್ಲಿ ಎಲ್ಲಾ ೨೨ ಜನ ಆರೋಪಿಗಳನ್ನು ಬಂಧಿಸಬೇಕು ಇಲ್ಲವಾದಲ್ಲಿ ಮತ್ತೆ ಹೋರಾಟವನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು.ನಂತರ ಕಲಬುರ್ಗಿ ಪೊಲೀಸ್ ಮಹಾನಿರ್ದೇಶಕರಿಗೆ ಬರೆದ ಮನವಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಹಣಮಂತ ಕಟ್ಟಿಮನಿ,ಟಿ.ರಂಗನಾಥ ಪ್ರಧಾನ ಕಾರ್ಯದರ್ಶಿ ಹುಲಗಪ್ಪ ದೇವತ್ಕಲ್ ಶಹಾಪುರ ತಾಲೂಕು ಅಧ್ಯಕ್ಷ ರಾಹುಲ್ ನಾಟೇಕಾರ್ ಮಾನಪ್ಪ ಝಂಡದಕೇರಾ ತಾಯಪ್ಪ ಕನ್ನೆಳ್ಳಿ ರವಿ ಬೊಮ್ಮನಹಳ್ಳಿ ಗುತ್ತಪ್ಪ ಬೊಮ್ಮನಹಳ್ಳಿ ಭೀಮಣ್ಣ ಹೆಬ್ಬಾಳ ನಾಗು ಗೋಗಿಕೇರಾ ಶಿವಣ್ಣ ನಾಗರಾಳ ಗೋಪಾಲ ರಾಚೂರ್ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…