ಕಲಬುರಗಿ: ಅಳಂದ ತಾಲ್ಲೂಕಿನ ನಿಂಬರ್ಗಾ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಮನೆಗಳ ಬೀಗ ಮುರಿದು ಆಭರಣಗಳ ಜೊತೆಯಲ್ಲಿ ಆಹಾರ ಧಾನ್ಯವನ್ನು ಕಳ್ಳತನ ಮಾಡುವ ಆರು ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ನಗದು ಸೇರಿ 8.65 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಕಮಸರ ನಾಯಕ ತಾಂಡದ ನಿವಾಸಿ ಶಿವರಾಜ್ ಗಂಗು, ಶಕಾಪೂರ ಪಾರ್ದಿ ನಿವಾಸಿ ರಾಮಜೀ ಜಕಲು ಕಾಳೆ ಹಾಗೂ ಇದೇ ಗ್ರಾಮದ ನಿವಾಸಿ ಬೇಗಂ ರಾಮಜೀ ಕಾಳೆ ಎಂಬ ಮಹಿಳೆಯನ್ನು ಬಂಧಿಸಲಾಗಿದೆ.
ಪೊಲೀಸ್ ಉಪಧೀಕ್ಷಕರಾದ ಮಲ್ಲಿಕಾರ್ಜುನ್ ಪ್ರಸನ್ನ ದೇಸಾಯಿ ಅವರ ಮಾರ್ಗದರ್ಶನದಲ್ಲಿ ಆಳಂದ ಸಿ.ಪಿ.ಐ ಮಂಜುನಾಥ ಎಸ್. ಮತ್ತು ಪಿ.ಎಸ್.ಐ ಮಹಾಂತೇಶ ಪಾಟೀಲ (ಕಾ&ಸು). ಆಳಂದ ಠಾಣೆ ಪಿ.ಎಸ್.ಐ ಮಲ್ಲಣ್ಣಾ, ಎ.ಎಸ್.ಐ ಜ್ಯೋತಿ ಹಾಗೂ ಸಿಬ್ಬಂದಿಗಳಾದ ಶಿವಾಜಿ, ಮಹಿಬೂಬ ಶೇಖ, ಚಂದ್ರಶೇಖರ, ಮಲ್ಲಿಕಾರ್ಜುನ ಗೊಟುರ, ಬಸವರಾಜ ಪೂಜಾರಿ, ಗುರುರಾಜ, ದಶರಥ, ಮಹೇಶ, ರತನ, ಹಣಮಂತ, ಮದುಮತಿ. ರೇಖಾಬಾಯಿ ವಿಶೇಷ ತಂಡದಿಂದ ಕಾರ್ಯಾಚರಣೆ ನಡೆದಿದೆ.
ಕಾರ್ಯಾಚರಣೆಯಲ್ಲಿ ಆರೋಪಿಗಳಿಂದ 85 ಗ್ರಾಂ ಬಂಗಾರದ ಆಭರಣಗಳು,4,25 ಮತ್ತು 15 ಸಾವಿರ ಬೆಲೆಯೂಳ್ಳ ಬೆಳ್ಳಿಯ ಆಭರಣ, 25 ಸಾವಿರ ಕಳ್ಳತನಕ್ಕೆ ಉಪಯೊಗಿಸಿದ ಒಂದು ಲಕ್ಷ ಮಾಲ್ಯದ ಎರಡು ಮೋಟಾರ ಸೈಕಲ್ ಮತ್ತು ಮೂರು ಲಕ್ಷ ಮೌಲ್ಯದ ಒಂದು ಮಿನಿ ಗೂಡ್ಭ ವಾಹನ ವಶಕ್ಕೆ ಪಡೆದುಕೊಂಡು ಒಟ್ಟು 8.65 ಲಕ್ಷ ಮೌಲ್ಯದ ವಸ್ತುಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…