ಕಲಬುರಗಿ: ನಗರದ ವಿವೇಕಾನಂದ್ ನಗರದಲ್ಲಿನ ಮಿಲೇನಿಯಂ ಶಾಲೆಗೆ ಜ್ಞಾನ್ ಪ್ರೋ ಸಂಸ್ಥೆಯು ಸ್ಟೆಮ್ ಕಲಿಕಾ ಸಾಧನ (ಸೈನ್ಸ್, ಟೆಕ್ನಾಲಾಜಿ, ಇಂಜಿನಿಯರಿಂಗ್, ಮ್ಯಾಥ್ಸ್) ಹಾಗೂ ವಿಜ್ಞಾನವನ್ನು ಮಾಡಿ ಕಲಿಯುವ ಮಹತ್ವವನ್ನು ಅರಿತು ೨೦೧೮ನೇ ಸಾಲಿನಿಂದ ಪ್ರೋಸೈನ್ಷಿಯಾ ಸಾಧನ ಅಳವಡಿಸಲಾಗಿದೆ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಪ್ರೀತ್ ಕಿತ್ತನಕೆರೆ ಅವರು ಇಲ್ಲಿ ಹೇಳಿದರು.
ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಅಂಗವಾಗಿ ಐದನೇ ತರಗತಿಯಿಂದ ೮ನೇ ತರಗತಿಯ ಪ್ರತಿಯೊಬ್ಬ ವಿದ್ಯಾರ್ಥಿಗೆ ವಿಜ್ಞಾನದ ಕಿಟ್ ಕೊಡಲಾಗುವುದು. ಮಕ್ಕಳು ವಿಜ್ಞಾನದ ಪಾಠ ಕೇಳುವುದಲ್ಲದೇ ಮಾಡಿ ಕಲಿಯುವ ಮುಖ್ಯ ಉದ್ದೇಶ ಹೊಂದಲಾಗಿದೆ ಎಂದರು.
ವೈಜ್ಞಾನಿಕ ಸ್ಪರ್ಧೆಗಳ ಆಧಾರದ ಮೇಲೆ ಕೇಂದ್ರ ಸರ್ಕಾರದ ಭಾಗವಾಗಿರುವ ಅಟಲ್ ಇನೋವೆಷನ್ ಮಿಷನ್ ಸಹ ಮಿಲೇನಿಯಂ ಶಾಲೆಯಲ್ಲಿ ಈಗಾಗಲೇ ಕಾರ್ಯಾರಂಭಗೊಂಡಿದೆ ಎಂದು ಅವರು ತಿಳಿಸಿದರು.
ದೇಶದ ಬೆಂಗಳೂರು, ಮೈಸೂರು, ಚೆನ್ನೈ, ಹೈದ್ರಾಬಾದ್, ಲಕ್ನೋ, ಗೋವಾ (ಪಣಜಿ), ಮುಂಬಯಿ, ಮಂಗಳೂರು ಸೇರಿದಂತೆ ೧೧ ಮಹಾನಗರಗಳಲ್ಲಿ ಜ್ಞಾನ್ ಪ್ರೋ ಸಂಸ್ಥೆಯ ಶಾಖೆಗಳು ಇವೆ. ಈ ವರ್ಷದಿಂದ ಎರಡನೇ ಹಂತವಾಗಿ ದ್ವಿತೀಯ ಮಹಾನಗರಗಳನ್ನು ವ್ಯಾಪ್ತಿಗೆ ತರಲಾಗುತ್ತಿದೆ. ಇಲ್ಲಿಯವರೆಗೆ ೨೫೦ಕ್ಕಿಂತಲೂ ಹೆಚ್ಚು ಶಾಲೆಗಳು ಹಾಗೂ ೩ ಲಕ್ಷಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಸಂಸ್ಥೆಯ ಫಲಾನುಭವಿಗಳಾಗಿದ್ದಾರೆ ಎಂದು ಅವವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಕಲ್ಯಾಣ ಕರ್ನಾಟಕ ಎಜುಕೇಶನ್ ಸೊಸೈಟಿ ಅಧ್ಯಕ್ಷ ಎಂ.ಎನ್. ಪಾಟೀಲ್ ಅವರು ಮಾತನಾಡಿ, ಪಠ್ಯಪುಸ್ತಕಕ್ಕೆ ಅನುಗುಣವಾಗಿ ಪ್ರಯೋಗಗಳನ್ನು ಶಿಕ್ಷಕರು ವಿದ್ಯಾರ್ಥಿಗಳ ಕೈಯಿಂದ ಮಾಡಿಸುತ್ತಾರೆ. ಇದು ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲ ಆಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಡಾ. ಶ್ರೀಶೈಲ್ ಘೂಳಿ, ಶಾಲಾ ಸಂಯೋಜನಾಧಿಕಾರಿ ಅಖಿಲೇಶ್ ದೇಶಪಾಂಡೆ ಅವರು ಉಪಸ್ಥಿತರಿದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…