ಖಾಯಂ ಶಿಕ್ಷಕರ ನೇಮಕ, ಮೂಲಸೌಕರ್ಯಕ್ಕಾಗಿ ಎಸ್.ಎಫ್.ಐ ಪ್ರತಿಭಟನೆ

ಕವಿತಾಳ: ಪಟ್ಟಣದ ಉರ್ದು ಪ್ರೌಢ ಶಾಲೆಗೆ ಖಾಯಂ ಶಿಕ್ಷಕರನ್ನು ನೇಮಿಸಲು ಹಾಗೂ ವರ್ಗಾವಣೆಯಾಗಿರುವ ಮಹ್ಮದ್ ಯೂಸೂಫ್ ನಾಗೂರ ಪ್ರಭಾರಿ ಮುಖ್ಯಗುರುಗಳನ್ನ ಪುನ: ಕವಿತಾಳಕ್ಕೆ ನೇಮಿಸಲು DDPI ಯವರು ನೀಡಿದ ಆದೇಶ ಉಲ್ಲಂಘನೆ ಮಾಡುತ್ತಿರುವ ದೇವದುರ್ಗ BEO ನಡೆ ಖಂಡಿಸಿ & ಶಾಲೆಗೆ ಖಾಯಂ ಶಿಕ್ಷಕರ ನೇಮಕ ಹಾಗೂ ಮೂಲಸೌಕರ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಯಿತು.

ಕವಿತಾಳ ಪಟ್ಟಣಕ್ಕೆ 3 ವರ್ಷಗಳ ಹಿಂದೆ ಉರ್ದು ಮಂಜೂರಾಗಿದ್ದು, ಇಲ್ಲಿಯವರೆಗೂ ಸಹ ಈ ಪ್ರೌಢಶಾಲೆಗೆ ಖಾಯಂ ಶಿಕ್ಷಕರ ನೇಮಕಾತಿ ಆಗಿಲ್ಲ. ವಿದ್ಯಾರ್ಥಿಗಳು ದೂರದ ಲಿಂಗಸುಗೂರು ರಾಯಚೂರು ಸೇರಿದಂತೆ ಅನೇಕ ಕಡೆ ಉರ್ದು ಶಿಕ್ಷಣ ಕಲಿಯಲು ಅಲೆಯುವಂಥ ಪರಿಸ್ಥಿತಿ ಉಂಟಾಗಿದೆ. ಶಾಲೆಯಲ್ಲಿ 80 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಶಿಕ್ಷಕರು ಇಲ್ಲದೇ ಇರುವುದರಿಂದ ಪೋಷಕರು ದೂರದ ಊರುಗಳಿಗೆ ವಿದ್ಯಾರ್ಥಿನಿಯರನ್ನ ಕಳಿಸಲು ಹೆದರುತ್ತಿದ್ದಾರೆ. ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಮಹ್ಮದ್ ಯೂಸುಫ್ ಮುಖ್ಯಗುರುಗಳನ್ನ ದೇವದುರ್ಗ ತಾಲೂಕಿಗೆ ವರ್ಗಾವಣೆ ಮಾಡಿದ್ದಾರೆ.

ಅವರನ್ನ ಪುನ: ಕವಿತಾಳ ಪಟ್ಟಣಕ್ಕೆ ವರ್ಗಾವಣೆ ಮಾಡಲು DDPI ಯವರು ಆದೇಶ ಹೊರಡಿಸಿದ್ದಾರೆ. ಆದರೆ ದೇವದುರ್ಗ ಬಿ ಇ ಓ ರವರು ಈ ಆದೇಶವನ್ನ ಉಲ್ಲಂಘಿಸುತ್ತಿದ್ದಾರೆ. ಈ ಖಾಯಂ ಶಿಕ್ಷಕರೇ ಇಲ್ಲದಿರುವುದರಿಂದ ಶಾಲೆಗೆ ಮಕ್ಕಳನ್ನ ಸೇರಿಸಲು ಪೋಷಕರು ಹಿಂದೆಟು ಹಾಕುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಕೂಡಲೇ ಕವಿತಾಳ ಪಟ್ಟಣಕ್ಕೆ ವರ್ಗಾವಣೆ ಗೊಂಡಿರುವ ಶಿಕ್ಷಕರನ್ನ ಪುನ: ಕವಿತಾಳ ನಗರಕ್ಕೆ ವರ್ಗಾಯಿಸಬೇಕೆಂದು ವಿದ್ಯಾರ್ಥಿ ಹಾಗೂ ಪೋಷಕರ ಒತ್ತಾಯವಾಗಿದೆ. ಮತ್ತು ಖಾಲಿ ಇರುವ ಎಲ್ಲ ವಿಷಯಾದರಿತ ಶಿಕ್ಷಕರನ್ನು ಕೂಡಲೇ ನೇಮಿಸಬೇಕು. ಹಾಗೂ ಶಾಲೆಗೆ ವಿದ್ಯಾರ್ಥಿಗಳಿಗನುಗುಣವಾಗಿ ಶೌಚಾಲಯ ಹೆಚ್ಚಿಸಬೇಕು. ಮತ್ತು ಮೂಲಭೂತ ಸೌಕರ್ಯಳಾದ ಬೆಂಚ್, ಕುಡಿಯುವ ನೀರು , ಪುಸ್ತಕ, ವಿಜ್ಞಾನ ಪ್ರಯೋಗಲಯ ಸೇರಿದಂತೆ ಇತರ ಸಮಸ್ಯೆ ಒದಗಿಸಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್ ಎಫ್ ಐ ಕವಿತಾಳ ವಲಯ ಸಮಿತಿಯುಆಗ್ರಹಿಸಿದ್ದಾರೆ.

ಈ ಸಂಧರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ವಲಯ ಘಟಕ ಅಧ್ಯಕ್ಷ ಮೌನೇಶ ಬುಳ್ಳಾಪುರ ಕಾರ್ಯದರ್ಶಿ ವೆಂಕಟೇಶ ಉಪಾಧ್ಯಕ್ಷರಾದ ನಾಗಮೋಹನ್ ಸಿಂಗ್ ಮುಖಂಡರಾದ ಮೌನೇಶ ಮಲ್ಲಿಕಾರ್ಜುನ ವಿದ್ಯಾರ್ಥಿಗಳಾದ ರಾಹೀನಾ, ನಫೀಜಾ, ಗೌಸೀಯಾ, ನೌಶೀನ್, ರುಬೀನಾ ಹಾಗೂ ಪಾಲಕರು ಸೇರಿದಂತೆ ಅನೇಕ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

4 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

5 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

7 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

18 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

20 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420