ಕಲಬುರಗಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಕಚೇರಿಯನ್ನು ಕಲಬುರಗಿಯಲ್ಲೇ ಉಳಿಸಿಕೊಳ್ಳುವಂತೆ ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಅವರು ಸರಕಾರವನ್ನು ಆಗ್ರಹಿಸಿದ್ದಾರೆ.
ಈಕುರಿತು ಡಿಸಿಎಂ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಗೋವಿಂದ ಕಾರಜೋಳ ಅವರಿಗೆ ಪತ್ರ ಬರೆದಿರುವ ಶಾಸಕರು,ತಾವು ಈ ಹಿಂದಿನ ಕೆಡಿಪಿ ಸಭೆಯಲ್ಲಿ ಸದರಿ ಕಚೇರಿಯನ್ನು ಯಾವ ಕಾರಣಕ್ಕೂ ಬೆಳಗಾವಿಗೆ ಸ್ಥಳಾಂತರವಾಗಲು ಬಿಡುವುದಿಲ್ಲ ಅದನ್ನು ಕಲಬುರಗಿ ಯಲ್ಲೇ ಉಳಿಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದೀರಿ. ಆದರೆ, ಇಲ್ಲಿಯವರೆಗೂ ಸ್ಥಳಾಂತರ ಮಾಡಿರುವ ಆದೇಶ ರದ್ದಾಗಿಲ್ಲ.ಬದಲಿಗೆ, ಸ್ಥಳಾಂತರ ಪ್ರಕ್ರಿಯೆ ನಡೆಯುತ್ತಿದೆ ಎನ್ನುವ ಮಾಹಿತಿ ಇದೆ ಎಂದು ಶಾಸಕರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪ್ರಾಧಿಕಾರದ ಕಚೇರಿ ಕಲಬುರಗಿ ಯಲ್ಲೇ ಇದ್ದರೆ, ಕಕ ವಿಭಾಗದ ಆರಯ ಜಿಲ್ಲೆಗಳಿಂದ ಸಂಗ್ರಹವಾಗುವ ಆಹಾರದ ಮಾದರಿಗಳನ್ನು ಪರೀಕ್ಷಿಸಿ ತಕ್ಷಣ ಕ್ರಮವಹಿಸಲು ಸಹಕಾರಿಯಾಗುತ್ತದೆ. ಹೀಗಿರುವಾಗ ಸ್ಥಳಾಂತರ ಪ್ರಕ್ರೀಯೆ ಮುಂದುವರೆಸಿದರೆ ಪದೇ ಪದೇ ಅನ್ಯಾಯಕ್ಕೊಳಗಾಗುತ್ತಿರುವ ಕಲಬುರಗಿ ಜಿಲ್ಲೆಗೆ ಮತ್ತೊಂದು ಘೋರ ಅನ್ಯಾಯವೆಸಗಿದಂತಾಗುತ್ತದೆ ಎಂದು ಶಾಸಕರು ಕಳವಳ ವ್ಯಕ್ತಪಡಿಸಿದ್ದಾರೆ.
ಆದ್ದರಿಂದ ಸ್ಥಳಾಂತರ ಆದೇಶವನ್ನು ರದ್ದುಗೊಳಿಸಿ ಪ್ರಾಧಿಕಾರದ ಕಚೇರಿಯನ್ನು ಕಲಬುರಗಿ ಯಲ್ಲೇ ಉಳಿಸಿಕೊಳ್ಳಲು ಬೇಕಾಗುವ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.
ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…
ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…
ಕಲಬುರಗಿ: ಎಷ್ಟೋ ಜನರ ಜೀವನ ಭಜನೆಯಿಂದ ಬದಲಾಗಿಗೆ ಕಾಯಿಲೆ ಬಿದ್ದು ಹಾಸಿಗೆ ಹಿಡಿದ ವ್ಯಕ್ತಿ ಭಜನೆ ಮಾಡುವುದರಿಂದ ಎದ್ದು ಗುಣಮುಖರಾದ…
ಕಲಬುರಗಿ: ಖಾಯಂ ಉದ್ಯೋಗ ಮತ್ತು ಬಾಕಿ ವೇತನಕ್ಕೆ ಸಂಬಂಧಿಸಿದಂತೆ ಕಲಬುರಗಿ ಮಹಾನಗರ ಪಾಲಿಕೆ ಪೌರಕಾರ್ಮಿಕರು ಧರಣಿ ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ…
ಕಲಬುರಗಿ: ನಗರದ ಎಚ್ಕೆಇ ಎಸ್ ನಿಜಲಿಂಗಪ್ಪ ದಂತ ಮಹಾವಿದ್ಯಾಲಯದ ಬಿಟಿಜಿಎಚ್ ಅಡಿಟೋರಿಯಮ್ ಸಭಾಂಗಣದಲ್ಲಿ ಎಚ್.ಕೆ.ಇ. ದಂತಮಹಾವಿದ್ಯಾಲಯದಿಂದ ಹಮ್ಮಿಕೊಂಡಿದ್ದ 'ಮೊಬೈಲ್ ಡೆಂಟಲ್…
ಕಲಬುರಗಿ: ಖಾಯಂ ಉದ್ಯೋಗ ಮತ್ತು ಬಾಕಿ ವೇತನಕ್ಕೆ ಸಂಬಂಧಿಸಿದಂತೆ ಕಲಬುರಗಿ ಮಹಾನಗರ ಪಾಲಿಕೆ ಪೌರಕಾರ್ಮಿಕರು ಧರಣಿ ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ…