ಶಿಕ್ಷಣದ ಖಾಸಗೀಕರಣ, ಕೇಂದ್ರೀಕರಣ ತೀವ್ರಗೊಳಿಸುವ ಕೇಂದ್ರದ ಬಜೆಟ್ : ಎಸ್ಎಫ್ಐ

ರಾಯಚೂರು: 2018ರ ಹಣಕಾಸು ವರ್ಷದಲ್ಲಿ ಶಿಕ್ಷಣ, ಆರೋಗ್ಯ ಒಳಗೊಂಡಂತೆ 42 ಸೆಸ್ ಗಳನ್ನು ಜಡಿದ ಮೋದಿ ಸರಕಾರ ಆ ಮೂಲಕ 2.5 ಲಕ್ಷ ಕೋಟಿಯನ್ನು ಸಂಗ್ರಹ ಮಾಡಿತ್ತು. ಆದರೆ ಆ ಮೊತ್ತವನ್ನು ಮರಳಿ ಸಂಬಂದಪಟ್ಟ ಇಲಾಖೆಗಳ ಅಭಿವೃದ್ದಿಗೆ ವೆಚ್ಚ ಮಾಡದೆ. ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಅನ್ಯಾಯ ಮಾಡಿದೆ ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷರಾದ ರಮೇಶ ವೀರಾಪೂರು ಟೀಕಿಸಿದ್ದಾರೆ.

‘ಯುಜಿಸಿ’ ರದ್ದುಗೊಳಿಸಿ ‘ಉನ್ನತ ಶಿಕ್ಷಣ ಆಯೋಗ’ (HEC) ರಚಿಸಲು ಈ ವರ್ಷ ಚಾಲನೆ. ಶಿಕ್ಷಣದ ಕೇಂದ್ರೀಕರಣಕ್ಕೂ ಚಾಲನೆ. ಇನ್ನು ವಿಶ್ವ ವಿದ್ಯಾಲಯಗಳ ಧನ ಸಹಾಯ ಮತ್ತು ಅನುದಾನವು ನೇರವಾಗಿ ಕೇಂದ್ರ ಶಿಕ್ಷಣ ಇಲಾಖೆಯ ಸುಪರ್ದಿಗೆ ಹೋಗುತ್ತದೆ. ಮುಂದಿನ 6 ವರ್ಶಗಳಲ್ಲಿ ದಲಿತ ಸಮುದಾಯದ ವಿದ್ಯಾರ್ಥಿಗಳಿಗಾಗಿ 35,219 ಕೋಟಿ ಹಣ ವೆಚ್ಚ ಮಾಡಲಾಗುವುದು ಎಂದು ಬಜೆಟ್ ಘೋಷಣೆ ಮಾಡಿದ್ದಾರೆ.

ಇದು ಎಂತಹ ವಂಚನೆ, ಮೋಸವೆಂದರೆ ಮೊದಲಿಗೆ ಇದು 1944ರಿಂದ ಜಾರಿಯಲ್ಲಿರುವ ಪ.ಜಾತಿ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಯೋಜನೆ. ಇದರಲ್ಲಿ ಹೊಸದೇನೂ ಇಲ್ಲ ದೇಶದಾದ್ಯಂತ ಸುಮಾರು 57 ಲಕ್ಷ ಪ.ಜಾತಿ ವಿದ್ಯಾರ್ಥಿಗಳಿದ್ದಾರೆ ಎಂದು ಅಂದಾಜಿಸಿದರೆ ಒಬ್ಬ ವಿದ್ಯಾರ್ಥಿಗೆ ಪ್ರತಿ ವರ್ಷ 10,000 ರೂ, ಪ್ರತಿ ತಿಂಗಳು 858 ರೂ. ದೊರಕುತ್ತದೆ. ಈ ಕೇವಲ ಹಣದಿಂದ ಆ ವಿದ್ಯಾರ್ಥಿಗೆ ಯಾವ ಆರ್ಥಿಕ ಅನುಕೂಲವೂ ದೊರಕುವುದಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯಗಳು 60:40 ಅನುಪಾತದಲ್ಲಿ ಕೊಡಬೇಕು. ರಾಜ್ಯ ಎಂದಿಗೂ ಕೊಡುವುದಿಲ್ಲ, ಹಾಗಾಗಿ ಕೇಂದ್ರವೂ ಕೊಡುವುದಿಲ್ಲ.  ಇದು ಬಡ ದಲಿತ, ಹಿಂದುಳಿದ,  ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚನೆ ಮಾಡುವ ಶಿಕ್ಷಣ ವಿರೋಧಿ ಬಜೆಟ್ ಆಗಿದೆ ಎಂದು ಅಭಿಪ್ರಯಾ ವ್ಯಕ್ತಪಡಿಸಿದ್ದಾರೆ.

ದೇಶದ ಸಮಗ್ರ ಶಿಕ್ಷಣ ಅಭಿವೃದ್ಧಿಗಾಗಿ ಕೇಂದ್ರ ಬಜೆಟ್ ನಲ್ಲಿ ಕನಿಷ್ಠ 10% ಮೀಸಲಿಡಬೇಕು ಎಂಬ ದಶಕಗಳ ಬೇಡಿಕೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡದಿರುವುದು ಅನಿರೀಕ್ಷಿತವೇನಲ್ಲ. ದುಡ್ಡಿದ್ದವರಿಗೆ ಶಿಕ್ಷಣವನ್ನು ಮಾರಾಟ ಮಾಡುವ ಶಿಕ್ಷಣದ ಖಾಸಗೀಕರಣ ಕೇಂದ್ರೀಕರಣ ತೀವ್ರಗೊಳಿಸುವ ಉದ್ದೇಶಗಳು ಎದ್ದು ಕಾಣುತ್ತಿವೆ ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಕಂದಗಲ್ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

3 hours ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

4 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

4 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

4 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

4 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420