ಕಲಬುರಗಿ: ಗಗನಕ್ಕೆ ಏರುತ್ತಿರುವ ತೈಲ ಮತ್ತು ಅಡಿಗೆ ಅನಿಲ ಬೆಲೆಯನ್ನು ಜನ ಸಾಮಾನ್ಯರಿಗೆ ಹೊರೆಯಾಗದಂತೆ ಅತಿ ಕಡಿಮೆ ದರದಲ್ಲಿ ಪೂರೈ ಸಲು ಕ್ರಮ ಕೈಗೊಳ್ಳುವಂತೆ ಜÉೈ ಕನ್ನಡಿಗರ ಸೇನೆ ಆಗ್ರಹಿಸಿದೆ.
ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ನಲ್ಲಿ ತೈಲ ಬೆಲೆ ಮತ್ತು ಅಡಿಗೆ ಅನಿಲ ಗ್ಯಾ ಸ್ ಬೆಲೆಗಳ ನಿಯಂತ್ರಿಸುವ ಕುರಿತು ಪ್ರಸ್ತಾವನೆ ಯಾಗದಿರುವುದನ್ನು ಖಂಡಿಸಿರುವ ಸೇನೆ, ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರು ತೀವ್ರ ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದ್ದಾರೆ.
ರಾಜ್ಯ ಸರ್ಕಾರ ಕೂಡಲೇ ಈ ಬೆಲೆ ಏರಿಕೆಯನ್ನು ತಡೆಯಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಿಕೊಡ ಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿ ಭಟನಾ ಪ್ರದರ್ಶನ ಕೈಗೊಳ್ಳಲಾಯಿತು.
ತೈಲದ ಮೇಳೆ ಹಾಕ ಲಾಗುವು ವಿವಿಧ ಸುಂಕ ಹಾಗೂ ತೆರಿಗೆಗಳನ್ನು ಕೈಬಿಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಅಲ್ಲದೇ ರಾಜ್ಯ ಸರ್ಕಾರವು ಕೂಡ ಇವುಗಳ ಮೇಲಿನ ರಾಜ್ಯ ಸುಂಕವನ್ನು ಸಂಪೂರ್ಣವಾಗಿ ಕೈಬಿಡ ಬೇಕು ಎಂದು ಸೇನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಎಚ್. ಭಾಸಗಿ ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸುನೀಲ ಪಾಣೆಗಾಂವ, ಶೇಷಗಿರಿ ಮರತೂರಕರ, ಪ್ರಶಾಂತ ಬಾಪುನಗರ, ಸಂಜುಕುಮಾರ ಮಾಳಗಿ, ಸಾಗರ ಸಿಂಗೆ, ಸುನೀಲ ಪವಾರ, ಅಮರ ಯಾದವ ಇದ್ದರು.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…