ಭಕ್ತಿ ಭಾವವೇ ಸಂಧ್ಯಾವಂದನೆ: ಅಜೇಂದ್ರ ಶ್ರೀಗಳು

ಶಹಾಪುರ : ನಿತ್ಯವೂ ಸಂಧ್ಯಾವಂದನೆಯಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿನ ಚಿತ್ತಚಾಂಚಲ್ಯ ದೂರವಾಗಿ ಏಕಾಗ್ರತೆ ಹೆಚ್ಚಾಗಿ ಭಗವಂತನಲ್ಲಿ ನಂಬಿಕೆ,ಪ್ರೀತಿ,ಭಯ,ಭಕ್ತಿ ಮುಂತಾದ ಭಾವನೆಗಳು ಅಚಲವಾಗಿ,ವ್ಯಕ್ತಿ ಆಧ್ಯಾತ್ಮದಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವದೆ ಸಂಧ್ಯಾವಂದನೆ ಎಂದು ಶಹಾಪುರದ ವಿಶ್ವಕರ್ಮ ಏಕದಂಡಿಗಿ ಮಠದ ಕಾಳಹಸ್ತೇಂದ್ರ ಮಹಾಸ್ವಾಮಿಗಳು ಹೇಳಿದರು.

ತಾಲ್ಲೂಕಿನ ಸಗರ ಗ್ರಾಮದ ತಿಂಥಿಣಿ ಶ್ರೀ ಮೌನೇಶ್ವರ ದೇವಸ್ಥಾನದ ಆವರಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಧಾರ್ಮಿಕ ಸಂಧ್ಯಾವಂದನ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಇದು ಹಿಂದೂಗಳ ಆಚರಿಸುವ ದೈನಂದಿನ ಕ್ರಿಯೆ ಆಗಿದೆ ಆದ್ದರಿಂದ ಸಮಾಜದ ಪ್ರತಿಯೊಬ್ಬರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿಕೊಂಡರು.

ಆಧ್ಯಾತ್ಮಿಕ ವಿಚಾರ ಧಾರೆಗಳು ಪ್ರತಿಯೊಬ್ಬ ವ್ಯಕ್ತಿಯಯಲ್ಲೂ ಒಂದಲ್ಲ ಒಂದು ರೀತಿಯಲ್ಲಿ ಪ್ರಭಾವ ಬೀರಿ’ಮನಸ್ಸಿನ ಸಮತೋಲನಕ್ಕೆ ಯೋಗ,ಧ್ಯಾನ,ಪ್ರಾರ್ಥನೆ, ದೇವರ ಪೂಜೆ ವ್ರತಾಚರಣೆಗಳು ಹಬ್ಬ ಹರಿದಿನಗಳು, ಮನುಕುಲದ ಬಾಂಧ್ಯವ್ಯ ವೃದ್ಧಿಗೆ ಪೂರಕವಾಗಿದೆ ಎಂದು ಹೇಳಿದರು.ಈ ಈ ನಿಟ್ಟಿನಲ್ಲಿ ಆಧ್ಯಾತ್ಮಿಕ ವಿಚಾರಧಾರೆಯನ್ನು ಪಸರಿಸುವ ಸಣ್ಣ ಪ್ರಯತ್ನ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ನುಡಿದರು.

ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಹಿರಿಯ ಮುಖಂಡರಾದ ಈರಣ್ಣ ಹತ್ತಿಗುಡೂರ,ವಾಸುದೇವ ವಠಾರ,ಮನೋಹರ ಪ್ರತಿಹಸ್ತ, ಬಲವಂತ ವಟಾರ,ಮಾನಯ್ಯ ಕಂಬಾರ,ಮನೋಹರ ವಿಶ್ವಕರ್ಮ,ಹಲಕರ್ಟೆಪ್ಪ ಪತ್ತಾರ,ದೇವಿಂದ್ರಪ್ಪ ವಟಾರ, ರಮೇಶ ಪ್ರತಿಹಸ್ತ, ದೇವರಾಜ ವಠಾರ, ವಿನೋದ ದೇವರಗುಡಿ, ಖಂಡಪ್ಪ ಬಜಾರ,ಹಾಗೂ ಇನ್ನಿತರ ಸಮಾಜದ ಹಿರಿಯ ಮುಖಂಡರು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ ಶಿಕ್ಷಣ ಫಲಿತಾಂಶ ಸುಧಾರಣೆಗೆ ತಜ್ಞರ ಸಮಿತಿಯಿಂದ 3 ತಿಂಗಳಲ್ಲಿ ವರದಿ: ಡಾ.ಅಜಯ್ ಸಿಂಗ್

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮಂಡಳಿ ಪಣ ತೊಟ್ಟಿದ್ದು, ಬರುವಂತಹ…

26 mins ago

ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ಆರ್.ವಿ.ನಾಯಕ ಚಾಲನೆ

ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…

2 hours ago

ಸಂಸ್ಕøತಿ ಉಳಿಸಿ ಬೆಳೆಸುವ ಸಂಘದ ಕಾರ್ಯ ಶ್ಲಾಘನೀಯ

ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…

2 hours ago

ಸುರಪುರ:ಅಭಾವೀಲಿಂ ಮಹಾಸಭೆಗೆ ಪದಾಧಿಕಾರಿಗಳ ನೇಮಕ

ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…

2 hours ago

ಕಲಬುರಗಿ ಪಾಲಿಕೆ ಉಪ ಆಯುಕ್ತರನ್ನು ಅಮಾನತುಗೊಳಿಸಲು ಶಾಸಕ ಬಿ.ಆರ್. ಪಾಟೀಲ ಆಗ್ರಹ

ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…

2 hours ago

ಅ.6 ರಂದು ಡಾ. ಲಕ್ಷ್ಮಣ ದಸ್ತಿಯವರಿಂದ 371 J ಕಲಂ ಸೌಲತ್ತುಗಳ ಬಗ್ಗೆ ವಿಶೇಷ ಉಪನ್ಯಾಸ

ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420