ಬೆಂಗಳೂರು: ಪ್ರೇಮಿಗಳ ಹಬ್ಬ – ವ್ಯಾಲಂಟೈನ್ಸ್ ಡೇಯನ್ನು ಮತ್ತಷ್ಟು ವಿಶೇಷ ಗೊಳಿಸುವ ಉದ್ದೇಶದಿಂದ ನಗರದ ಹೃದಯಭಾಗದಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿರುವ ದ ಸೋಕ್ ಮಾರ್ಕೇಟ್ ಗೆ ಇಂದು ನಟಿ ರಿಷಿಕಾ ಶರ್ಮಾ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಫೆಬ್ರವರಿ 14 – ವ್ಯಾಲಂಟೈನ್ ಡೇ – ಪ್ರೇಮಿಗಳ ದಿನಕ್ಕೆ ಅದರದೇ ಆದ ವಿಶೇಷತೆ ಇದೆ. ತಮ್ಮ ಸಂಗಾತಿಗೆ ವಿಶೇಷವಾದ ಕೊಡುಗೆಯನ್ನು ಕೊಡುವ ಮೂಲಕ ಬಹುತೇಕ ಪ್ರೇಮಿಗಳು ಇದನ್ನು ಆಚರಿಸುತ್ತಾರೆ. ಸಂಗಾತಿಗೆ ವಿಶಿಷ್ಟವಾದ ಕೊಡುಗೆಯನ್ನು ಆಯ್ಕೆ ಮಾಡುವ ಅವಕಾಶವನ್ನು ನೀಡುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಫೆಬ್ರವರಿ 5 ರಿಂದ 14 ರ ವರೆಗೆ ದ ಸೋಕ್ ಮಾರ್ಕೇಟ್ – ಆರ್ಟ್ ಅಂಡ್ ಕ್ರಾಫ್ಟ್ ಮೇಳವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಕರಕುಶಲ ವಸ್ತು ಪ್ರದರ್ಶನ ಹಾಗೂ ಮರಾಟ ಮೇಳದ ಆಯೋಜಕ ಅಫ್ತಾಬ್ ಮಾತನಾಡಿ, ಚಿತ್ತಾರ – ಗ್ರಾಂಡ್ ಫ್ಲಿಯಾ ಮಾರ್ಕೇಟ್ ಸಹಯೋಗದಲ್ಲಿ ಆಯೋಜಿಸಿರುವ ಈ ಕರಕುಶಲ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ, ನೂರಕ್ಕೂ ಹೆಚ್ಚು ಸ್ಟಾಲ್ಗಳಲ್ಲಿ ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.
ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳ ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುಲಿವೆ.
ಫೆಬ್ರವರಿ ೫ ರಿಂದ ಫೆಬ್ರವರಿ ೧೪ ವರೆಗೆ ಈ ಪ್ರದರ್ಶನವು ನಡೆಯಲಿದ್ದು, ಪ್ರತಿದಿನ 11 ರಿಂದ ಸಂಜೆ 7 ಗಂಟೆಯವರೆಗೆ ಪ್ರದರ್ಶನ ಮತ್ತು ಮಾರಾಟ ಮೇಳ ಇರಲಿದೆ ಎಂದು ಹೇಳಿದರು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…