ಪ್ರೊ.ಭಗವಾನಗೆ ಮಸಿ ಬಳಿದ ಪ್ರಕರಣ: ಮೀರಾ ವಕೀಲೆ ಸದಸ್ಯತ್ವ ರದ್ದು

ಬೆಂಗಳೂರು: ಹಿರಿಯ ಸಾಹಿತಿ ಪ್ರೊ.ಕೆ.ಎಸ್ ಭಗವಾನ ಅವರ ಮುಖಕ್ಕೆ ಮಸಿ ಬಳಿದ ಕೃತ್ಯವನ್ನು ಖಂಡಿಸಿ, ಬೆಂಗಳೂರು ವಕೀಲರ ಸಂಘ ವಕೀಲೆ ಮೀರಾ ರಾಘವೇಂದ್ರ ಅವರ ಸದಸ್ಯತ್ವವನ್ನು ರದ್ದು ಪಡೆಸಿ ಸಂಘದ ಅಧ್ಯಕ್ಷರಾದ ಎ.ಪಿ ರಂಗನಾಥ್, ಕಾರ್ಯದರ್ಶಿ ಎ.ಎನ್ ಗಂಗಾಧರಯ್ಯ ಹಾಗೂ ಖಜಾಂಚಿ ಶಿವಮೂರ್ತಿ ಅವರು ಆದೇಶ ಹೊರಡಿಸಿದ್ದಾರೆ.

ಬೆ೦ಗಳೂರು ನಗರ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ ಹಾಜರಾಗಲು ಬಂದಿದ್ದ ಹಿರಿಯ ಸಾಹಿತಿ.ಕೆ.ಎಸ್‌.ಭಗವಾನ್‌ ರವರ ಮುಖಕ್ಕೆ ವಕೀಲರಾದ ಮೀರಾ ರಾಘವೇ೦ದ್ರ ರವರು ಮಸಿ ಬಳಿದಿದ್ದನ್ನು ಬೆ೦ಗಳೂರು ವಕೀಲರ ಸಂಘವು ತೀವ್ರವಾಗಿ ಖಂಡಿಸುತ್ತದೆ. ವಕೀಲೆ ಮೀರಾ ರಾಘವೇಂದ್ರರವರು ಬೆ೦ಗಳೂರು ವಕೀಲರ ಸಂಘದ ಸದಸ್ಯರಾಗಿರುವುದಿಲ್ಲ ಎಂದು ತಿಳಿಸಿದೆ.

ಮೀರಾ ರಾಘವೇ೦ದ್ರರವರ ಈ ಕೃತ್ಯದಿ೦ದ ವಕೀಲ ವೃತ್ತಿಗೆ ಕಪ್ಪು ಚುಕ್ಕಿಯಾಗಿದೆ. ಬೆ೦ಗಳೂರು ವಕೀಲರ ಸ೦ಘವು ನ್ಯಾಯಾಂಗದ ಗೌರವವನ್ನು ಕಾಪಾಡುವಲ್ಲಿ ಮು೦ಚೂಣಿಯಲ್ಲಿರುತ್ತದೆ ಎಂದು ಸಂಘ ತಮ್ಮ ಆದೇಶ ಪತ್ರದಲ್ಲಿ ತಿಳಿಸಿದೆ.

ವಕೀಲೆ ಮೀರಾ ಅವರ ಸದಸ್ಯತ್ವ ರದ್ದತಿಗೆ ಒತ್ತಾಯಿಸಿ ದೇವರಾಜ್ ಅರಸು ಪ್ರತಿಮೆ ಪ್ರತಿಷ್ಠಾನ ಸಮಿತಿ ಸೇರಿದಂತೆ ರಾಜ್ಯ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಒತ್ತಾಯಿಸಿದವು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420