ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಪೂರಕ: ಗುರು ಪಾಟೀಲ್

0
73

ಶಹಾಪುರ: ಪ್ರತಿಯೊಬ್ಬರು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಕ್ರೀಡೆಗಳು ಪೂರಕವಾಗಿವೆ ಎಂದು ಮಾಜಿ ಶಾಸಕರಾದ ಗುರುಪಾಟೀಲ್ ಶಿರವಾಳ ಹೇಳಿದರು.

ತಾಲೂಕಿನ ಗಂಗನಾಳ ಗ್ರಾಮದಲ್ಲಿ ಮಾಜಿ ಶಾಸಕ ದಿವಂಗತ ಶಿವಶೇಖರಪ್ಪಗೌಡ ಪಾಟೀಲ ಶಿರವಾಳ ಅವರ ಸ್ಮರಣಾರ್ಥವಾಗಿ ಕ್ರಿಕೆಟ್ ಹಾಗೂ ಟೆನ್ನಿಸ್ ಬಾಲ್ ಟೂರ್ನಮೆಂಟ್ ಕ್ರಿಕೆಟ್ ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

ನಮ್ಮ ದೇಶದಲ್ಲಿ ಕ್ರೀಡೆಗೆ ಹೆಚ್ಚು ಗೌರವವಿದ್ದು ಆದ್ದರಿಂದ ಇಂದಿನ ಯುವಕರು ಹೆಚ್ಚೆಚ್ಚು ಕ್ರೀಡಾಮನೋಭಾವನೆ ಬೆಳೆಸಿಕೊಳ್ಳವುದರ ಜೊತೆಗೆ ಗ್ರಾಮೀಣ ಕ್ರೀಡೆಗಳಿಗೆ ಮಹತ್ವ ಕೊಡಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ನೂತನ ಗ್ರಾಪಂ ಸದಸ್ಯರಾದ ಸಿದ್ದಪ್ಪ ಕಿಲಾರಿ,ಅಮರಪ್ಪ ತಳವಾರ, ಗ್ರಾಮದ ಮುಖಂಡರಾದ ಮಲ್ಲಪ್ಪ ದೊಡಮನಿ,ಶರಣು ಅಕ್ಕಿ,ಚಂದ್ರಶೇಖರ ದಳಪತಿ,ಅಶೋಕ್ ನಾಯಕ್, ರಾಜು ಬಾಣತಿಹಾಳ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here