ಸುರಪುರ: ಅಖಿಲ ಭಾರತ ವೀರಶೈವ ಮಹಾಸಭಾದ ಸುರಪುರ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆಗೊಳಿಸಲಾಯಿತು.
ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಸಮಿತಿಯು ಎಲ್ಲಾ ಜಿಲ್ಲಾ ಮತ್ತು ತಾಲೂಕು ಘಟಕಕ್ಕೆ ಪದಾಧಿಕಾರಿಗಳ ನೇಮಕಕ್ಕಾಗಿ ಚುನಾವಣೆ ಘೋಷಣೆಯಾಗಿತ್ತು,ಆದರೆ ತಾಲೂಕಿನ ಎಲ್ಲಾ ಮುಖಂಡರು ಸಭೆ ನಡೆಸಿ ಪದಾಧಿಕಾರಿಗಳನ್ನು ಅವಿರೋಧವಾಗಿ ನೇಮಕಗೊಳಸಿದರು.
ತಾಲೂಕು ಘಟಕದ ಗೌರವಾಧ್ಯಕ್ಷರಾಗಿ ಹಿರಿಯ ಮುಖಂಡ ಶರಣಪ್ಪ ಕಲಕೇರಿಯವರನ್ನು ನೇಮಕಗೊಳಿಸಲಾಯಿತು,ಅಲ್ಲದೆ ಅಧ್ಯಕ್ಷರಾಗಿ ಮಂಜುನಾಥ ಎಂ.ಜಾಲಹಳ್ಳಿ ಉಪಾಧ್ಯಕ್ಷರಾಗಿ ಜಯಲಲಿತಾ ಪಾಟೀಲ್ ಜಗದೀಶ ಸೊನ್ನದ್ ಕೆಂಭಾವಿ ಹಾಗು ಸಿದ್ದನಗೌಡ ಪಾಟೀಲ್ ಹೆಬ್ಬಾಳ ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ ಅಂಗಡಿ ಕನ್ನೆಳ್ಳಿ ಹಾಗು ಕಾರ್ಯದರ್ಶಿಗಳಾಗಿ ಮಲ್ಲಿಕಾರ್ಜುನರಡ್ಡಿ ಕೋಳಿಹಾಳ ಅಮ್ಮಾಪುರ ಕವಿತಾ ರೇವಡಿ ಹುಣಸಗಿ ಹಾಗು ಅಂಬ್ರೇಶ ಕುಂಬಾರ ಮತ್ತು ಕೋಶಾಧ್ಯಕ್ಷರನ್ನಾಗಿ ಬಸವರಾಜ ಬೂದಿಹಾಳ ಅವರನ್ನು ನೇಮಕಗೊಳಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ಜಮದ್ರಖಾನಿ ಸುರೇಶ ಸಜ್ಜನ್ ಎಸ್.ಎಮ್.ಕನಕರಡ್ಡಿ ಜಿ.ಎಸ್.ಪಾಟೀಲ್ ಸಂಗಣ್ಣ ಎಕ್ಕೆಳ್ಳಿ ಸೂಗುರೇಶ ವಾರದ್ ಸೋಮಶೇಖರ ಶಾಬಾದಿ ಪ್ರಕಾಶ ಸಜ್ಜನ್ ಡಿ.ಸಿ.ಪಾಟೀಲ್ ಕೆಂಭಾವಿ ರವಿಗೌಡ ಹೆಮನೂರ ಪ್ರದೀಪ ಕದರಾಪುರ ಸೇರಿದಂತೆ ಅನೇಕರಿದ್ದರು.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…