ಶ್ರೀಗಿರಿ ಮಠದ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಗೆ ಸನ್ಮಾನ

0
36

ಸುರಪುರ: ತಾಲೂಕಿನ ಲಕ್ಷ್ಮೀಪುರ ಮರಡಿ ಮಲ್ಲಿಕಾರ್ಜುನ ದೇವಸ್ಥಾನ ಬಳಿಯ ಶ್ರೀಗಿರಿ ಮಠದಲ್ಲಿ ನಡೆದ ಶ್ರೀ ಶರಣಬಸವೇಶ್ವರರ ಪುರಾಣ ಕಾರ್ಯಕ್ರಮ ಹಾಗು ಶ್ರೀಗಿರಿ ಮಠದ ಪೀಠಾಧಿಪತಿಗಳಾಗಿ ಪೀಠಾಧಿಕಾರ ಸ್ವೀಕರಿಸಿದ ವಾರ್ಷಿಕೋತ್ಸವದ ಅಂಗವಾಗಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಶ್ರೀಗಿರಿ ಮಠದ ಪೂಜ್ಯರಾದ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಯವರನ್ನು ಶರಣ ಸೇವಾ ಸಂಸ್ಥೆಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಖಿಲ ಭಾರತೀಯ ವೀರಶೈವ ಮಹಾಸಭಾದ ತಾಲೂಕು ಗೌರವಾಧ್ಯಕ್ಷ ಶರಣಪ್ಪ ಕಲಕೇರಿ ಅಧ್ಯಕ್ಷ ಮಂಜುನಾಥ ಎಮ್.ಜಾಲಹಳ್ಳಿ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಂಗಡಿ ಕನ್ನೆಳ್ಳಿ ಸಿದ್ದನಗೌಡ ಹೆಬ್ಬಾಳ ವೀರಶೈವ ಲಿಂಗಾಯತ ಯುವ ವೇದಿಕೆ ರಾಜ್ಯ ಸಂಚಾಲಕ ಚಂದ್ರಶೇಖರ ಡೊಣೂರ ಸಂಸ್ಥೆಯ ಅಧ್ಯಕ್ಷ ಶಿವರಾಜ ಕಲಕೇರಿ ಮಲ್ಲು ಬಾದ್ಯಾಪುರ ಆನಂದ ಮಡ್ಡಿ ರಾಜು ಗುಡೂರ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here