ಪೇಠ ಅಮ್ಮಾಪುರ ಗ್ರಾಮ ಪಂಚಾಯತಿ ಅಧ್ಯಕ್ಷೆಗೆ ತಾಲೂಕು ಬಣಜಿಗ ಸಮಾಜ ಸನ್ಮಾನ

ಸುರಪುರ: ತಾಲೂಕಿನ ಪೇಠ ಅಮ್ಮಾಪುರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಸ್ಸಮ್ಮ ದಿ:ಬಸಲಿಂಗಪ್ಪ ಸಾಹುಕಾರ ಅವರಿಗೆ ಕಲ್ಯಾಣ ಕರ್ನಾಟಕ ಪಂಚಮಸಾಲಿ ಸಮುದಾಯದ ಬಣಜಿಗರ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವೀರಶೈವ ಲಿಂಗಾಯತ ಸಮುದಾಯದ ಹಿರಿಯ ಮುಖಂಡ ಶಿವರಾಜಪ್ಪ ಗೋಲಗೇರಿ ಮಾತನಾಡಿ,ನಮ್ಮ ಸಮುದಾಯ ರಾಜಕೀಯವಾಗಿ ಇನ್ನೂ ಬೆಳವಣಿಗೆ ಕಾಣಬೇಕಿದೆ ಅದಕ್ಕೆ ನಮ್ಮ ಒಗ್ಗಟ್ಟು ತುಂಬಾ ಮುಖ್ಯವಾಗಿದೆ ಎಂದರು.ಅಲ್ಲದೆ ತಾಲೂಕಿನಲ್ಲಿ ಪೇಠ ಅಮ್ಮಾಪುರ ಗ್ರಾಮ ಪಂಚಾಯತಿಗೆ ನಮ್ಮ ಪಂಚಮಸಾಲಿ ಸಮುದಾಯದ ಬಣಜಿಗ ಸಮಾಜದ ಹಿರಿಯರು ಅಧ್ಯಕ್ಷರಾಗಿರುವುದು ತುಂಬಾ ಸಂತೋಷದ ಸಂಗತಿಯಾಗಿದೆ.ತಮ್ಮಿಂದ ಪೇಠ ಅಮ್ಮಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಸರ್ವಾಂಗಿಣ ಅಭಿವೃಧ್ಧಿ ಕಾಣಲಿ ಹಾಗು ತಮ್ಮ ಆಡಳಿತವು ಇನ್ನೂ ಅನುಗಾಲ ಪೇಠ ಅಮ್ಮಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಜನತೆ ನೆನಪಲ್ಲಿಟ್ಟುಕೊಳ್ಳುವಂತಾಗಲಿ ಎಂದು ಹಾರೈಸುವುದಾಗಿ ತಿಳಿಸಿದರು.

ನಂತರ ಅಧ್ಯಕ್ಷರಾಗಿ ನೇಮಕಗೊಂಡ ಬಸಮ್ಮ ದಿ:ಬಸಲಿಂಗಪ್ಪ ಸಾಹುಕಾರ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಮುಖಂಡರಾದ ಶಿವು ಸಾಹುಕಾರ ರಾಜಶೇಖರ ತಂಬಾಕೆ ಶಿವುಗೌಡ ಸೂಗುರ್ ಶರಣು ಸಾಹುಕಾರ ಚನ್ನಬಸವ ವಾಲಿ ಸಿದ್ದು ಮುಧೋಳ ಜಗದೀಶ ತಂಬಾಕೆ ಸಜ್ಜನ್‌ಕುಮಾರ ಕಲ್ಯಾಣಶೆಟ್ಟಿ ಅಂಬರೀಶ ದೇಸಾಯಿ ಬಸವರಾಜ ಬಿರಾದಾರ್ ಶಿವಲಿಂಗಪ್ಪ ಶೆಟ್ಟಿ ಅಮ್ಮಾಪುರ ಗುರುಪಾದಪ್ಪ ಬೇವಿನಗಿಡ ಅನಿಲ್ ಶೆಟ್ಟಿ ಬಸವಣಪ್ಪ ಹಂಗರಗಿ ಒಕ್ಕೂಟದ ಸಂಚಾಲಕ ನಾಗಭೂಷಣ ಯಾಳಗಿ ರವಿಕುಮಾರ ಶೆಟ್ಟಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420