ಬಿಸಿ ಬಿಸಿ ಸುದ್ದಿ

ಸಮಾನತೆ ಸಮಚಿತ್ತತೆ ಮಠಗಳ ತಳಹದಿ: ಡಾ.ಗಂಗಾಧರ ಶ್ರೀ

ವಾಡಿ: ಜಾತಿ ಸಮಾನತೆ ಕೋಮು ಸೌಹಾರ್ಧತೆ ಜತೆಗೆ ಮನಸ್ಸಿನ ಸಮಚಿತ್ತತೆಯ ತಳಹದಿಯ ಮೇಲೆ ಮಠಗಳು ನಿರ್ಮಾಣವಾಗಬೇಕು ಎಂದು ಅಬ್ಬೆತುಮಕೂರು ವಿಶ್ವರಾಧ್ಯ ಮಠದ ಪೂಜ್ಯ ಡಾ.ಗಂಗಾಧರ ಮಹಾಸ್ವಾಮೀಜಿ ನುಡಿದರು.

ಸುಕ್ಷೇತ್ರ ಹಳಕರ್ಟಿ ಗ್ರಾಮದಲ್ಲಿ ಕಟ್ಟಿಮನಿ ಹಿರೇಮಠದ ಲಿಂ.ಮುನೀಂದ್ರ ಶಿವಯೋಗಿಗಳ ೩೮ನೇ ಪುಣ್ಯಾರಾಧನೆ ನಿಮಿತ್ತ ಏರ್ಪಡಿಸಲಾಗಿದ್ದ ಮಹಾದಾಸೋಹಿ ಕಲಬುರಗಿ ಶರಣಬಸವೇಶ್ವರರ ಪುರಾಣ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶ್ರೀಗಳು ಆಶೀರ್ವಚನ ನೀಡಿದರು.

ಕ್ತರ ಮನಸ್ಸು ಕಟ್ಟುವ ಕಾರ್ಯ ಮಠಗಳಿಂದ ನಿರಂತರವಾಗಿ ನಡೆಯುತ್ತಿದೆ. ಧಾರ್ಮಿಕ ಆಚರಣೆಗಳು ಹಾಗೂ ಸಾಂಪ್ರದಾಯಿಕ ಪದ್ಧತಿಗಳು ಮುಂದಿನ ತಲೆಮಾರಿಗೆ ಉಳಿಸಲು ಮಠಗಳು ಶ್ರಮಿಸುತ್ತಿವೆ. ಹಳಕರ್ಟಿ ಕಟ್ಟಿಮನಿ ಹಿರೇಮಠವು ಮುನೀಂದ್ರ ಶ್ರೀಗಳ ನಿರಂತರ ಸೇವೆಯಿಂದ ಭಕ್ತೋದ್ಧಾರ ಕಾರ್ಯದಲ್ಲಿ ತೊಡಗಿರುವುದು ಸಂತಸದ ಸಂಗತಿ. ಲಿಂ.ಮುನೀಂದ್ರ ಶ್ರೀಗಳ ಜ್ಞಾನ ದಾಸೋಹ ಕಾರ್ಯ ಮುಂದುವರೆಯಲಿ. ಯಾವ ಮಠದಲ್ಲಿ ಸಮಾನತೆ, ನಿಷ್ಪಕ್ಷಪಾತ, ತ್ಯಾಗ, ನಿಷ್ಟೆಗಳು ನಡೆದಾಡುತ್ತಿರುತ್ತವೋ ಆ ಮಠ ಜನಮುಖಿಯಾಗಿ ಗುರುತಿಸಿಕೊಳ್ಳುತ್ತದೆ. ಹಳಕರ್ಟಿ ಮಠಕ್ಕೆ ಅಂತಹ ಪಾವಿತ್ರ್ಯತೆಯ ಇತಿಹಾಸವಿದೆ ಎಂದು ಸ್ಮರಿಸಿದರು.

ಸಾನಿಧ್ಯ ವಹಿಸಿ ಮಾತನಾಡಿದ ಚಿತ್ತಾಪುರ ಕಂಬಳೇಶ್ವರ ಮಠದ ಪೀಠಾಧಿಪತಿ ಶ್ರೀಸೋಮಶೇಖರ ಸ್ವಾಮೀಜಿ, ಭಕ್ತರ ನೋವು ನಲಿವುಗಳಿಗೆ ಸ್ಪಂದಿಸಿ ಪರಿಹಾರ ಸೂಚಿಸುವಲ್ಲಿ ಮುನೀಂದ್ರ ಶ್ರೀಗಳು ಯಶಸ್ವಿಯಾಗಿದ್ದಾರೆ. ಮಠದಲ್ಲಿ ನಿರಂತರವಾಗಿ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಯಿಂದ ಭಕ್ತರ ಜ್ಞಾನಾರ್ಜನೆ ವೃದ್ಧಿಯಾಗುತ್ತದೆ ಎಂದರು.

ಕಟ್ಟಿಮನಿ ಹಿರೇಮಠದ ಪೂಜ್ಯ ಶ್ರೀಮುನೀಂದ್ರ ಸ್ವಾಮೀಜಿ, ಕಲಕೇರಿ ಹಿರೇಮಠದ ಶ್ರೀಸಿದ್ದಾರಾಮ ಶಿವಾಚಾರ್ಯ, ಹತ್ತಿಕಣಮಸ ವಿರಕ್ತ ಮಠದ ಪ್ರಭುಕಾಂತ ಮಹಾಸ್ವಾಮೀಜಿ, ಜಂಗಮ ಸಮಾಜದ ತಾಲೂಕು ಅಧ್ಯಕ್ಷ ನೀಲಯ್ಯಸ್ವಾಮಿ ಮಠಪತಿ, ತಾಪಂ ಸದಸ್ಯ ಬಸವರಾಜ ಲೋಕನಳ್ಳಿ, ಮುಖಂಡರಾದ ಮಲ್ಲಣ್ಣ ಇಸಬಾ, ಮಲ್ಲಣ್ಣ ಸಾಹು ಸಂಗಶೇಟ್ಟಿ, ವೀರಭದ್ರಯ್ಯಸ್ವಾಮಿ ಬೆಲ್ಲದ್, ಪುರಾಣಿಕರಾದ ಮಡಿವಾಳಯ್ಯ ಶಾಸ್ತ್ರೀ ಜೇರಟಗಿ, ಸಂಗೀತ ಕಲಾವಿದ ಯಶವಂತ ಬಡಿಗೇರ, ಮಲ್ಲಿಕಾರ್ಜುನ ಭಜಂತ್ರಿ, ರಾಜಶೇಖರ ಕಟ್ಟಿಸಂಗಾವಿ ಸೇರಿದಂತೆ ನೂರಾರು ಭಕ್ತರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಪ್ರಾಚಾರ್ಯ ಬಸವರಾಜ ಅವಂಟಿ ನಿರೂಪಿಸಿ, ವಂದಿಸಿದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

6 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

6 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

8 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

8 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

8 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

9 hours ago