ಕಲಬುರಗಿ: ನಗರದಲ್ಲಿ ಪರವಾನಿಗೆಯಿಲ್ಲದೆ ಸಾರ್ವಜನಿಕ ಮತ್ತು ಸರ್ಕಾರಿ ಜಾಗದಲ್ಲಿ ಹಂದಿಗಳ ಹಾವಳಿ ಹೆಚ್ಚಾಗಿ ಸಾರ್ವಜನಿಕರ ಆರೋಗ್ಯ ಮೇಲೆ ಪರಿಣಾಮ ಬೀರುತ್ತಿದೆ. ಹಂದಿ ಮಾಲೀಕರು ಕೂಡಲೆ ಹಂದಿಗಳನ್ನು ನಗರದಿಂದ ಸ್ಥಳಾಂತರಿಸಬೇಕು ಇಲ್ಲದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಹಂದಿಗಳ ಹಾವಳಿ ಮನುಷ್ಯರಿಗೆ ಪ್ರಾಣಿ ಜನ್ಯ ರೋಗ ಬರುವ ಸಾಧ್ಯತೆವಿದೆ. ನಗರದಲ್ಲಿನ ಹಂದಿಗಳ ಹಾವಳಿಯಿಂದ ಜನಸಾಮಾನ್ಯರ ಸಂಚಾರಕ್ಕೆ ಅಡಚಣೆ, ಪರಿಸರವು ಹದಗೆಡುತ್ತಿರುವುದಲ್ಲದೆ ಸ್ವಚ್ಛ ಕಲಬುರಗಿಗೆ ಇದರಿಂದ ಅಡೆ ತಡೆಯಾಗುತ್ತಿರುವ ಬಗ್ಗೆ ಪಾಲಿಕೆಗೆ ಹಲವಾರು ದೂರುಗಳು ಬರುತ್ತಿರುವ ಕಾರಣ ಹಂದಿ ಮಾಲೀಕರಿಗೆ ಈ ಹಿಂದೆ ನೋಟಿಸ್ ನೀಡಿ ಹಂದಿ ಸ್ಥಳಾಂತರ ಕಾರ್ಯವನ್ನು ಪಾಲಿಕೆಯಿಂದಲೆ ಕೈಗೊಳ್ಳಲಾಗಿದೆ.
ಮುಂದಿನ ದಿನಗಳಲ್ಲಿ ಹಂದಿ ಮಾಲೀಕರು ತಮಗೆ ಸಂಬಂಧಿಸಿದ ಹಂದಿಗಳನ್ನು ನಗರದಿಂದ ಹೊರವಲಯಕ್ಕೆ ಸ್ಥಳಾಂತರಿಸದಿದ್ದರೇ, ಸೂಕ್ತ ಕಾನೂನು ಕ್ರಮಕೈಗೊಂಡು ಹಂದಿ ಹಿಡಿಯುವ ತಂಡವನ್ನು ಕರೆತಂದು ನಗರದಲ್ಲಿನ ಹಂದಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ಸ್ನೇಹಲ್ ಸುಧಾಕರ ಲೋಖಂಡೆ ಅವರು ಸ್ಪಷ್ಠಪಡಿಸಿದ್ದಾರೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…