ಸುರಪುರ: ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿನ ಎಲ್ಲಾ ದೇವಸ್ಥಾನಗಳಲ್ಲಿ ಜಾತ್ರೆ ಉತ್ಸವ ನಡೆಸಲು ಅನುಮತಿಸಿರುವುದಾಗಿ ಸರಕಾರ ಘೋಷಿಸಿದೆ,ಆದ್ದರಿಂದ ತಾಲೂಕಿನ ತಿಂಥಣಿ ಮೌನೇಶ್ವರ ಜಾತ್ರೆಯಲ್ಲಿ ಬಳೆ ವ್ಯಾಪಾರಿಗಳ ಅಂಗಡಿ ತೆರೆಯಲು ಅವಕಾಶ ಕಲ್ಪಿಸುವಂತೆ ತಾಲೂಕು ಬಳೆ ವ್ಯಾಪಾರಿಗಳ ಸಂಘದ ಮುಖಂಡರು ಮನವಿ ಮಾಡಿದರು.
ನಗರದ ತಹಸೀಲ್ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿದ ಮುಖಂಡರು,ಕೋವಿಡ್ ಕಾರಣದಿಂದ ಎಲ್ಲಾ ಜಾತ್ರೆ ಉತ್ಸವಗಳನ್ನು ರದ್ದುಗೊಳಿಸಿದ್ದ ಸರಕಾರ ಈಗ ಆದೇಶ ರದ್ದುಗೊಳಿಸಿ ಜಾತ್ರೆಗಳನ್ನು ನಡೆಸಲು ಅವಕಾಶ ನೀಡಿದೆ,ಆದ್ದರಿಂದ ಈಗಾಗಲೆ ಕೊರೊನಾ ಕಾರಣದಿಂದ ಹೈರಾಣಾಗಿರುವ ಬಳೆ ವ್ಯಾಪಾರಿಗಳಿಗೆ ಇದೇ ಫೇಬ್ರವರಿ ೨೧ ರಿಂದ ೨೬ರ ವರೆಗೆ ನಡೆಯುವ ತಿಂಥಣಿ ಮೌನೇಶ್ವರ ಜಾತ್ರೆಯಲ್ಲಿ ಬಳೆ ವ್ಯಾಪಾರದ ಅಂಗಡಿಗಳನ್ನು ತೆರೆಯಲು ಅವಕಾಶ ಮಾಡಿಕೊಡಬೇಕೆಂದು ವಿನಂತಿಸಿದರು.
ನಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮವನಿಯಲ್ಲಿ ಗ್ರೇಡ-೨ ತಹಸೀಲ್ದಾರ್ ಸೂಫಿಯಾ ಸುಲ್ತಾನರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ಮುಖಂಡರಾದ ಅಪ್ಸರ್ ಬಳೆಗಾರ ಕಮಲದ್ದೀನ್ ಬಳಿಗಾರ ದಲ್ಲಾರಯ್ಯ ಬಳೆಗಾರ ಮೈನೊದ್ದೀನ್ ಚೌದ್ರಿ ಮಹ್ಮದ್ ಹುಸೇನ್ ದೇವಪ್ಪ ಸಯ್ಯದ್ ಬಸವರಾಜ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…