ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮ ಪಂಚಾಯತಿಗೆ ಆಯ್ಕೆಯಾದ ನೂತನ ಗ್ರಾಮ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಡೆಸಲಾಯಿತು.
ನೂತನ ಅಧ್ಯಕ್ಷರಾದ ಭೀಮಣ್ಣ ದೀವಳಗುಡ್ಡ ಹಾಗು ಉಪಾಧ್ಯಕ್ಷರಾದ ಗಂಗಮ್ಮ ಲಕ್ಷ್ಮಣ ಅವರು ಅಧಿಕಾರ ವಹಿಸಿಕೊಂಡರು.ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಭೀಮಣ್ಣ,ನಾನು ಅಧ್ಯಕ್ಷನಾಗುವೆ ಎಂದು ಅಂದುಕೊಂಡಿರಲಿಲ್ಲ ಆದರೆ ನಿಮ್ಮೆಲ್ಲರ ದಯೆಯಿಂದ ಅಧ್ಯಕ್ಷ ಸ್ಥಾನ ಲಭಿಸಿದೆ,ಎಲ್ಲ ಸದಸ್ಯರ ಹಾಗು ಗ್ರಾಮದ ಜನರ ನೆರವಿನೊಂದಿದೆ ಉತ್ತಮವಾದ ಸೇವೆ ಮಾಡಿ ಗ್ರಾಮದ ಅಭೀವೃಧ್ಧಿಗೆ ಶ್ರಮಿಸುವುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ಮುಖಂಡರಾದ ವೆಂಕಟೇಶ ಬೇಟೆಗಾರ ಮಾತನಾಡಿ,ನೂತನ ಅಧ್ಯಕ್ಷ ಉಪಾಧ್ಯಕ್ಷರಾದವರಿಗೆ ಉತ್ತಮವಾದ ಅವಕಾಶ ಲಭಿಸಿದೆ ಇದರಿಂದ ನಮ್ಮ ದೇವರಗೋನಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಮಾದರಿ ಗ್ರಾಮ ಪಂಚಾಯತಿಯನ್ನಾಗಿ ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯರಾದ ಲಿಂಗಯ್ಯ ತಾತಾ ಹೊನ್ನಯ್ಯ ಮುತ್ಯ ಬಸವಂತ್ರಾಯ ಶಿಕ್ಷಕರು ದೇವಿಂದ್ರಪ್ಪ ಪಿಡಿಒ ರವೀಂದ್ರ ಅಂಬ್ಲಯ್ಯ ಬೇಟೆಗಾರ ಮಾರ್ಥಂಡಪ್ಪ ದೊರೆ ನಾಗಪ್ಪ ಗುತ್ತೇದಾರ ಶಿವರಯಾ ಕಾಡ್ಲೂರ್ ಶಿವಮೋನಯ್ಯ ನಾಯಕ ಹಣಮಂತ ರವಿಶಂಕರ ಪಂಚಾಯತಿ ಸದಸ್ಯರು ಪರಮಣ್ಣ ಉಜರತಿ ಮೌನೇಶ ಗುರಿಕಾರ ಸೇರಿದಂತೆ ಗ್ರಾಮ ಪಂಚಾಯತಿಯ ಎಲ್ಲಾ ಸಿಬ್ಬಂದಿಗಳು ಹಾಗು ಗ್ರಾಮಸ್ಥರಿದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…