ಸುರಪುರ: ಕೋವಿಡ್ ಸಂದರ್ಭದಲ್ಲಿ ನಿರಂತರವಾಗಿ ಒಂದಿಲ್ಲೊಂದು ರೀತಿಯಲ್ಲಿ ಜನರಿಗೆ ನೆರವಾಗುವ ಮೂಲಕ ಅಜೀಂ ಪ್ರೇಮ್ ಜಿ ಪೌಂಡೇಶನ್ನ ಸೇವೆ ಅನನ್ಯವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ ಮಾತನಾಡಿದರು.
ನಗರದ ಹಳೆ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಅಜೀಂ ಪ್ರೇಮ್ ಜಿ ಪೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಆಶಾ ಕಾರ್ಯಕರ್ತೆಯರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಅಜೀಂ ಪ್ರೇಮ್ ಜಿ ಪೌಂಡೇಶನ್ ದೇಶದ ಮಾದರಿ ಸಂಸ್ಥೆಗಳಲ್ಲಿ ಒಂದಾಗಿದೆ,ಕೊರೊನಾ ಸಂದರ್ಭದಲ್ಲಿ ಅನೇಕ ಆರೋಗ್ಯಕ್ಕೆ ಸಂಬಂಧಿಸಿದ ಸಲಕರಣೆಗಳನ್ನು ವಿತರಿಸುವ ಮೂಲಕ ಸರಕಾರಕ್ಕೆ ನೆರವಾಗಿರುವ ಮಾದರಿ ಸಂಘಟನೆಯಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಪಾಲ್ಗೊಂಡಿದ್ದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಖಜಾಂಚಿ ಸೋಮರಡ್ಡಿ ಮಂಗಿಹಾಳ ಮಾತನಾಡಿ,ಅಜೀಂ ಪ್ರೇಮ್ ಜಿ ಪೌಂಡೇಶನ್ ಶಿಕ್ಷಣ ರಂಗಕ್ಕೂ ಅನೇಕ ಕೊಡುಗೆಯನ್ನು ನೀಡಿದೆ,ಅದರಂತೆ ಈಗ ಆಶಾ ಕಾರ್ಯಕರ್ತೆಯರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸುವ ಮೂಲಕ ಅವರ ಬದುಕಿದೆ ಆಸರೆಯಾಗಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಇಪ್ಪತ್ತಕ್ಕೂ ಹೆಚ್ಚು ಜನರಿಗೆ ಆಹಾರ ಧಾನ್ಯಗಳ ಕಿಟ್ ಹಾಗು ಸೆಫ್ಟಿ ಕಿಟ್ಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಸಿಡಿಪಿಒ ಲಾಲಸಾಬ್ ಪೀರಾಪುರ್ ಪೌಂಡೇಶನ್ನ ಸದಸ್ಯರಾದ ವಿನೋದ ಕುಮಾರ್ ಮಲ್ಲೇಶಿ ಮಲ್ಲಪ್ಪ ಹುಲಗಪ್ಪ ಅನ್ವರ್ ಜಮಾದಾರ ಸೇರಿದಂತೆ ಅನೇಕ ಜನ ಆಶಾ ಕಾರ್ಯಕರ್ತೆಯರು ಹಾಗು ವೈದ್ಯಕೀಯ ಸಿಬ್ಬಂದಿಗಳು ಭಾಗವಹಿಸಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…