ದೇವರಗೋನಾಲ ಗುಡ್ಡದ ತಿಮ್ಮಪ್ಪ ದೇವಸ್ಥಾನದ ಬಳಿ ನಿಧಿಗಾಗಿ ನೆಲ ಅಗೆದ ಕಳ್ಳರು

ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮದ ಗುಡ್ಡದ ತಿಮ್ಮಪ್ಪ ದೇವಸ್ಥಾನದ ಬಳಿಯಲ್ಲಿ ಬುಧವಾರ ರಾತ್ರಿ ನಿಧಿಗಳ್ಳರು ನಿಧಿಗಾಗಿ ನೆಲ ಅಗೆದಿರುವ ಘಟನೆ ನಡೆದಿದೆ.

ದೇವರಗೋನಾಲ ಮತ್ತು ಸುತ್ತಮುತ್ತಲ ಗ್ರಾಮದ ಜನರ ಆರಾಧ್ಯ ದೈವವಾಗಿರುವ ಗುಡ್ಡದ ತಿಮ್ಮಪ್ಪ ದೇವರು ಊರಿಂದ ಅನತಿ ದೂರದಲ್ಲಿರುವುದರಿಂದ ದೇವಸ್ಥಾನದ ಬಳಿಯಲ್ಲಿ ರಾತ್ರಿ ವೇಳೆಯಲ್ಲಿ ಜನರು ಇಲ್ಲದಿರುವುದನ್ನು ಅರಿತು ನಿಧಿಗಾಗಿ ದೇವಸ್ಥಾನದ ಗೋಡೆಯ ಬಳಿಯ ನೆಲವನ್ನು ಅಗೆಯಲಾಗಿದೆ.ಆದರೆ ನಿಧಿ ದೊರೆತ ಬಗ್ಗೆ ತನಿಖೆಯಿಂದ ತಿಳಿದುಬರಬೇಕಿದೆ.

ಈ ಘಟನೆ ಕುರಿತು ದೇವರಗೋನಾಲ ಗ್ರಾಮದ ಮುಖಂಡ ವೆಂಕಟೇಶ ಬೇಟೆಗಾರ ಮಾತನಾಡಿ,ಯಾರೋ ಕಿಡಿಗೇಡಿಗಳು ದೇವರ ಬಳಿಯೆ ನಿಧಿಗಾಗಿ ನೆಲ ಅಗೆದಿದ್ದಾರೆ,ಗುಡ್ಡದ ತಿಮ್ಮಪ್ಪ ದೇವರು ಸತ್ಯವುಳ್ಳ ದೇವರಾಗಿದ್ದು ಇಲ್ಲಿ ಅನೇಕ ಪವಾಡ ಸದೃಶ ಘಟನೆಗಳು ಕಣ್ಮುಂದಿವೆ,ದೇವಸ್ಥಾನದ ಬಳಿಯಲ್ಲಿನ ಚಿಕ್ಕ ಹೊಂಡವು ಬೇಸಿಗೆಯಲ್ಲೂ ನೀರು ಇರುವ ಮೂಲಕ ದೇವರ ಪವಾಡ ಎನ್ನುವಂತಿದೆ.

ನಮ್ಮ ಭಾಗದಲ್ಲಿ ಮಳೆ ಬಾರದಿರುವಾದ ಈ ದೇವರಿಗೆ ಪರವು ಮಾಡಿದಾಗ ಮಳೆ ಬಂದ ಅನೇಕ ಉದಾಹರಣೆಗಳಿವೆ,ಇಂತಹ ದೇವರ ಬಳಿಯೆ ನಿಧಿ ಕಳ್ಳತನಕ್ಕೆ ಬಂದಿರುವುದು ದುರಾದೃಷ್ಟಕರ ಸಂಗತಿಯಾಗಿದೆ.ತಾಲೂಕು ಆಡಳಿತ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡು ನಿಧಿಗಾಗಿ ಶೋಧ ನಡೆಸಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

sajidpress

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420