ಅಫಜಲಪುರ: ಹಾವನೂರ್ ಉಪಕೇಂದ್ರದ ಚಿಕ್ಕ ಗೊಬ್ಬೂರು ಗ್ರಾಮದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ನೂತನ ಗ್ರಾಮ ಪಂಚಾಯತ್ ಸದಸ್ಯರಾದ ಮಹಾದೇವಿ ಗುರಣ್ಣ ಕೂಡಿ ಅವರು ದೀಪವನ್ನು ಬೆಳಗುವುದರ ಮೂಲಕ ಚಾಲನೆಯನ್ನು ನೀಡಿದರು.
ತದನಂತರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಬಳೆ ಮಾತನಾಡಿ ಸದೃಢವಾದಮಗು ದೇಶದ ಸಂಪತ್ತು ಎನ್ನುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು ತುಂಬಾ ಸಂತೋಷ, ಈ ಸಂದರ್ಭದಲ್ಲಿ ತಾಯಿ ಮರಣ ಶಿಶುಮರಣ ಗ್ರಾಮೀಣ ಪ್ರದೇಶದಲ್ಲಿ ಆಗದಂತೆ ತಡೆಯುವ ನಿಟ್ಟಿನಲ್ಲಿ ಸರಕಾರದ ಯೋಜನೆಗಳು, ಹಾಗೂ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ವಿವರವಾಗಿ ನೀಡಿದರು.
ನಂತರ ಸತ್ಯವತಿ ,MLHP ತಾಯಿಯ ಎದೆಹಾಲಿನ ಮಹತ್ವ ಕುರಿತು ತುಂಬಾ ಮಾರ್ಮಿಕವಾಗಿ ಮನಮುಟ್ಟುವಂತೆ ವಿವರಿಸಿದರು. ಆರೋಗ್ಯ ಸಹಾಯಕ ಲಸಿಕೆಗಳ ಮಹತ್ವ ಕುರಿತು ಮಾಹಿತಿ ನೀಡಿದರು, ತದನಂತರ ಗುಂಡಮ್ಮ ಕೆ ಆರೋಗ್ಯ ಸಹಾಯಕಿ ಮಹಿಳೆ ಕುಟುಂಬ ಕಲ್ಯಾಣ ಯೋಜನೆಗಳಲ್ಲಿ ತಾತ್ಕಾಲಿಕ ವಿಧಾನಗಳ ಕುರಿತು ಮಾಹಿತಿ ನೀಡಿದರು.
ಕೊನೆಯದಾಗಿ ಹರ್ಷ, ಶಿವಶಂಕರ್, ಶರತ್ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಗ್ರಾಮ ಪಂಚಾಯತ್ ಸದಸ್ಯರಿಂದ ವಿತರಿಸಲಾಯಿತು ಕಾರ್ಯಕ್ರಮದ ವಂದನಾರ್ಪಣೆಯನ್ನು ಆಶಾ ಕಾರ್ಯಕರ್ತೆ ಮಮತಾ ಅವರೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು