ಬಿಸಿ ಬಿಸಿ ಸುದ್ದಿ

ನಾಲವಾರ ಮಠದಲ್ಲಿ ಸಂಭ್ರಮದ ತನಾರತಿ-ರಥೋತ್ಸವ

ವಾಡಿ: ಈ ಭಾಗದ ಸುಪ್ರಸಿದ್ಧ ನಾಲವಾರದ ಶ್ರೀಕೋರಿಸಿದ್ಧೇಶ್ವರ ರಥೋತ್ಸವ ಹಾಗೂ ಭಕ್ತೀಯ ತನಾರತಿ ಉತ್ಸವ ಶುಕ್ರವಾರ ಸಂಭ್ರಮದಿಂದ ನಡೆಯಿತು. ಮಠದ ಪೀಠಾಧಿಪತಿ ಡಾ.ಸಿದ್ಧ ತೋಟೇಂದ್ರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಜಾತ್ರಾಮಹೋತ್ಸವದ ಸಾಂಪ್ರದಾಯಿಕ ಆಚರಣೆಗಳು ಪೂರ್ಣಗೊಂಡವು.

ಕಳೆದ ೨೦ ದಿನಗಳಿಂದ ಕೋರಿಸಿದ್ಧೇಶ್ವರ ಮಠದಲ್ಲಿ ನಡೆಯುತ್ತಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಶರಣ ಕಡಕೋಳ ಮಡಿವಾಳಪ್ಪನವರ ಪುರಾಣ ಪ್ರವಚನ ಶುಕ್ರವಾರ ಸಂಜೆ ಸಮಾರೋಪಗೊಂಡವು. ಮಧ್ಯರಾತ್ರಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ತನಾರತಿ ಉತ್ಸವ ಜಾತ್ರೆಗೆ ಮೆರಗು ತಂದುಕೊಟ್ಟಿತು. ಸಂಜೆ ವಿವಿಧೆಡೆಯಿಂದ ಆಗಮಿಸಿ ಶ್ರೀಮಟದ ಆವರಣದಲ್ಲಿ ಜಮಾಯಿಸಿದ್ದ ಅಸಂಖ್ಯಾತ ಭಕ್ತರ ಜಯಘೋಷಗಳ ನಡುವೆ ಶ್ರೀಕೋರಿಸಿದ್ಧೇಶ್ವರರ ಭವ್ಯ ರಥೋತ್ಸವ ಜರುಗಿತು.

ರಥೋತ್ಸವ ಮಠದ ಆವರಣದಲ್ಲಿ ಜಾಗುತ್ತಿದ್ದಂತೆ ಬಣ್ಣ ಬಣ್ಣದ ಪಟಾಕಿಗಳ ಸದ್ದು ಆಕಾಶದಲ್ಲಿ ಆಕರ್ಷಕ ರಂಗೋಲಿ ಸೃಷ್ಠಿಸಿದವು. ತೇರು ಎಳೆಯುತ್ತಿದ್ದ ಭಕ್ತರು ಜಯಘೋಷಣೆ ಮೊಳಗಿಸಿದರು. ಸೇರಿದ್ದ ಭಕ್ತರು ತೇರಿನತ್ತ ಹಣ್ಣುಗಳನ್ನು ಎಸೆದು ಹರಕೆ ತೀರಿಸಿದರು. ಧಾರ್ಮಿಕ ಸಮಾರಂಭದ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನಂತರ ನಡೆದ ಧಾರ್ಮಿಕ ಸಮಾರಂಭದಲ್ಲಿ ವಿವಿಧ ಮಠಾಧೀಶರು, ರಾಜಕೀಯ ಗಣ್ಯರು ಮತ್ತು ಕಲಾವಿದರು ಪಾಲ್ಗೊಂಡಿದ್ದರು.

emedialine

Recent Posts

ಶಹಾಪುರ: ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ

ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…

1 hour ago

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

7 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

19 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

21 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

21 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

21 hours ago