ಬಿಸಿ ಬಿಸಿ ಸುದ್ದಿ

ಖರ್ಗೆ ಅವರಿಗೆ ಜೀವ ಬೆದರಿಕೆ ಕರೆ: ತನಿಖೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ಒತ್ತಾಯ

ಶಹಾಬಾದ: ರಾಜ್ಯಸಭಾ ಸದಸ್ಯ, ಕಾಂಗ್ರೆಸ್‌ನ ಹಿರಿಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಕರೆ ಬಂದಿದ್ದು,ಈ ಬಗ್ಗೆ ಸೂಕ್ತ ತನಿಖೆಗೆ ಒಳಪಡಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ಒತ್ತಾಯಿಸಿದರು.

ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ಮಾತನಾಡಿರುವುದಕ್ಕೆ ಖರ್ಗೆ ಅವರಿಗೆ ಬೆದರಿಕೆ ಹಾಕಿರುವುದು ಬಿಜೆಪಿ ಮತ್ತು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಇನ್ನೊಂದು ಒಳ ಮುಖ ತೋರಿಸುತ್ತದೆ. ದೇಶದ ಅಭಿವೃದ್ಧಿ ಹಾಗೂ ಒಳಿತಿಗಾಗಿ ಮೋದಿ ವಿರುದ್ಧ ಮಾತನಾಡಿದ ಖರ್ಗೆ ಅವರಿಗೆ ಸೋಮವಾರ ಮಧ್ಯಪ್ರದೇಶದಿಂದ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸುವ ಜತೆಗೆ ಜೀವ ಬೆದರಿಕೆ ಹಾಕಲಾಗಿದೆ.

ಈಗಾಗಲೇ ಅನೇಕ ಬಾರಿ ಜೀವ ಬೆದರಿಕೆ ಬಂದಿರುವ ಬಗ್ಗೆ ದೂರು ಸಲ್ಲಿಸಿದರೂ ಸರ್ಕಾರ ಮಾತ್ರ ಯಾವುದೇ ಕ್ರಮಕೈಗೊಂಡಿಲ್ಲ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆಯೇ ರಾಷ್ಟ್ರೀಯ ವರಿ?ರಿಗೆ ಬೆದರಿಕೆ ಕರೆ ಮಾಡುವ ಘಟನೆಗಳು ಕಂಡು ಬರುತ್ತಿವೆ ಎಂದು ಆರೋಪಿಸಿದರು.ರೈತ ವಿರೋಧಿ, ಕೂಲಿ ಕಾರ್ಮಿಕರ ವಿರೋಧಿ ಮಸೂದೆಗಳನ್ನು ಜಾರಿಗೆ ತರುತ್ತಿರುವ ಕೇಂದ್ರ ಸರಕಾರ ವಿರುದ್ಧ ಖರ್ಗೆ ಧ್ವನಿ ಎತ್ತಬಾರದೇ ಎಂದು ಪ್ರಶ್ನಿಸಿದ ಅವರು, ದೇಶದ ಜನತೆ ಪರವಾಗಿ ಖರ್ಗೆ ಧ್ವನಿ ಎತ್ತಿದರೆ ಬೆದರಿಕೆ ಕರೆ ಬರುವುದು ಹೊಸದೆನಲ್ಲ.

ಈ ಹಿಂದೆ ಅನೇಕ ಬಾರಿ ಇಂತಹ ಕರೆಗಳು ಬಂದಿವೆ. ಪೋಲಿಸ್ ಠಾಣೆಗೆ ದೂರು ದಾಖಲು ಮಾಡಿದ್ದರೂ ಇಲ್ಲಿಯವರೆಗೆ ತನಿಖೆ ನಡೆಸಿ ಅಫರಾದಿಗಳನ್ನು ಪತ್ತೆ ಹಚ್ಚುವಲ್ಲಿ ಬಿಜೆಪಿ ಸರಕಾರ ವಿಫಲವಾಗಿದೆ. ಖರ್ಗೆಗೆ ಅವರಿಗೆ ಜೀವ ಬೇದರಿಕೆ ಹಾಕಿದ ವ್ಯಕ್ತಿಗಳನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

13 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

13 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

15 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

15 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

15 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

16 hours ago