ಶಹಾಬಾದ: ಜ್ಞಾನಕ್ಕಿಂತ ಮಿಗಿಲಾದದ್ದು ಮತ್ತೊಂದಿಲ್ಲ. ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಆಸಕ್ತಿಯನ್ನು ಬೆಳಸಿಕೊಳ್ಳಬೇಕೊಂಡು ಭವ್ಯ ಭಾರತ ನಿರ್ಮಾಣದ ಶಿಲ್ಪಿಗಳಾಗಬೇಕು ಎಂದು ಎಸ್.ಎಸ್.ಮರಗೋಳ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಅನೀಲಕುಮಾರ ಕೊಪ್ಪಳಕರ್ ಹೇಳಿದರು.
ಅವರು ಶುಕ್ರವಾರ ನಗರದ ಎಸ್.ಎಸ್.ಮರಗೋಳ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಸ್ವಾಗತ ಮತ್ತು ಪುನಶ್ಚೇತನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಹೆಚ್ಕೆಇ ಸಂಸ್ಥೆ ಶಿಸ್ತಿಗೆ ಹಾಗು ಉತ್ತಮ ಶೈಕ್ಷಣಿಕ ಚಟುವಟಿಗೆ ಹೆಸರುವಾಸಿಯಾಗಿದ್ದು, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹೊರಹೊಮ್ಮಿಸುವ ಕಾಲೇಜಾಗಿದೆ. ಈ ಸಂಸ್ಥೆಯಲ್ಲಿ ಓದಿದ ವಿದ್ಯಾರ್ಥಿಗಳು ಅನೇಕರು ಉನ್ನತವಾದ ಹುದ್ದೆಯಲ್ಲಿದ್ದಾರೆ. ಅವರಂತೆ ಎಲ್ಲಾ ವಿದ್ಯಾರ್ಥಿಗಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಅತಿಥಿಗಳಾಗಿ ಮಲ್ಲಿನಾಥ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಜ್ಞಾನ ದಾಹಿಗಳಾಗಬೇಕು. ಸತತ ಅಧ್ಯಯನ ಮೂಲಕ ಬದುಕನ್ನು ರೂಪಿಸಿಕೊಳ್ಳಬೇಕು. ಆ ಮೂಲಕ ದೇಶದ ಬೆಳವಣಿಗೆಗೆ ಶ್ರಮಿಸಬೇಕು.ಓದು ಬರಹ ಬರುವುದು ಅಧ್ಯಯನದಿಂದ, ಅಧ್ಯಯನ ಅನ್ನುವುದು ತಪ್ಪಸ್ಸು. ಯಾರು ತಪ್ಪಸ್ಸು ಮಾಡುತ್ತಾರೊ ಅವರು ಬಹಳ ಎತ್ತರಕ್ಕೆ ಬೆಳೆಯುತ್ತಾರೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್.ಎಸ್.ಮರಗೋಳ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಶಿವಲಾಲ ಹತ್ತಿ, ಸತತ ಅಧ್ಯಯನ ಮತ್ತು ಕಠಿಣ ಪರಿಶ್ರಮವಿದ್ದರೆ ವಿದ್ಯಾರ್ಥಿಗಳು ಸ್ಪರ್ಧಾ ಜಗತ್ತಿನಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಉಪನ್ಯಾಸಕರಾದ ಡಾ.ವೆಂಕಟರಾಜಪ್ಪ, ರಾಮಣ್ಣ ಇಬ್ರಾಹಿಂಪೂರ, ಸಾಂಸ್ಕೃತಿಕ ಸಲಹೆಗಾರರಾದ ಗೌರಮ್ಮ.ಕೆ,ಪಾರ್ವತಿ ಬಸ್ಮೆ, ಶಂಕ್ರಮ್ಮ ಕೋಬಾಳ,ಮಮತಾ ರಾಜಾಪೂರ,ಸಮೀಕ್ಷಾ ಪಾಂಡೆ,ಸುವರ್ಣಾ ಪಾಟೀಲ, ಆಕಾಶ ಬೊಮ್ಮನಳ್ಳಿ,ಅಂಬ್ರೇಶ ಮಾವನೂರ,ಪ್ರವೀಣಕುಮಾರ ಲಿಂಗಶೆಟ್ಟಿ, ಮಲ್ಲಿಕಾರ್ಜುನ ಇಂಗಿನ, ಬಸವರಾಜ ಮದ್ರಕಿ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಇದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…