ಶಹಾಬಾದ: ನಗರದ ಸಮಿಪದ ಶಹಾಬಾದ-ವಾಡಿ ವೃತ್ತದಲ್ಲಿ ಬೂದಿ ಹೊತ್ತುಕೊಂಡು ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬಗಳು ನೆಲಕ್ಕುರುಳಿ ವಿದ್ಯುತ್ ವ್ಯತ್ಯಯ ಉಂಟಾದ ಘಟನೆ ಶುಕ್ರವಾರ ಮಧ್ಯಾನ ನಡೆದಿದೆ.
ವಾಡಿ ಕಡೆಯಿಂದ ಬೂದಿ ಹೊತ್ತುಕೊಂಡು ಬರುತ್ತಿದ್ದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ ಹೊಂದಿಕೊಂಡಿರುವ ಶಹಾಬಾದ-ವಾಡಿ ವೃತ್ತದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡು ಕಂಬಗಳು.
ಅಲ್ಲದೇ ಜಿಇ ಕಾರ್ಖಾನೆಯ ಪಂಕೌಂಡ ಗೋಡೆ ಡಿಕ್ಕಿ ಹೊಡೆದು ಲಾರಿ ಮುಳ್ಳು ಕಂಟಿಯಲ್ಲಿ ಹೋಗಿ ಸಿಲುಕೊಂಡಿದೆ. ವಿದ್ಯುತ್ ಕಂಬಗಳು ನೆಲಕ್ಕುರುಳಿದ ಪರಿಣಾಮ ಸುಮಾರು ಮೂರು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.ಅದೃಷ್ಟವಶ ಯಾರ ಜೀವಕ್ಕೂ ಹಾನಿಯಾಗಿಲ್ಲ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.