ಶಹಾಪುರ: ಬಿಜೆಪಿ ಹಾಗೂ ಕಾಂಗ್ರೆಸ್ ದುರಾಡಳಿತಕ್ಕೆ ಬೇಸರಗೊಂಡು ಇಂದು ಜನರು ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಒಲವು ತೋರುತ್ತಿದ್ದಾರೆ ಮುಂಬರುವ ಚುನಾವಣೆಯಲ್ಲಿ ಅಂತಹ ಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜೆಡಿಎಸ್ ಯುವ ಮುಖಂಡರಾದ ಅಮೀನ್ ರೆಡ್ಡಿ ಪಾಟೀಲ್ ಯಾಳಗಿ ಹೇಳಿದರು.
ತಾಲ್ಲೂಕಿನ ರಸ್ತಾಪುರ ಗ್ರಾಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತೊರೆದು ಹಲವಾರು ಕಾರ್ಯಕರ್ತರು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು ಯಾವುದೇ ಸಂದರ್ಭದಲ್ಲಿ ಅನ್ಯಾಯವಾದರೆ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದು ಮತದಾರರಲ್ಲಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಮಲ್ಲಣ್ಣ ಆಪರೇಟರ್ ಮೆಂಬರ್, ದೇವಿಂದ್ರಪ್ಪ ನಾಯ್ಕೋಡಿ, ಅಂಬ್ರಪ್ಪ ತಳವಾರ್,ಚಂದಪ್ಪ ನಾಟೇಕರ್,ಭೀಮಣ್ಣ ನಾಯ್ಕೋಡಿ,ಲಕ್ಷ್ಮಣ್ ಹಲಗಿ, ಬಾಗಣ್ಣ ಹಲಗಿ,ಶರಬಣ್ಣ ಹಲಗಿ,ಮಾನಪ್ಪ ಹಲಗಿ,ಹಾಗೂ ಇತರರು ಪಕ್ಷಕ್ಕೆ ಸೇರ್ಪಡೆಗೊಂಡರು.