ಕಲಬುರಗಿಯ ಮೂವರಿಗೆ ಹರಿದಾಸ ಅನುಗ್ರಹ ಪ್ರಶಸ್ತಿ ಪ್ರದಾನ

ಕಲಬುರಗಿ: ಬೆಂಗಳೂರಿನ ಉತ್ತರಾದಿ ಮಠದ ಶ್ರೀ ಸತ್ಯಪ್ರಮೋದ ಕಲ್ಯಾಣ ಮಂಟಪದಲ್ಲಿ ಶ್ರೀನಿವಾಸ ಉತ್ಸವ ಬಳಗ ಗುರುವಾರ ಆಯೋಜಿಸಿದ್ದ ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಕಲಬುರಗಿಯ ಮೂವರಿಗೆ “ಹರಿದಾಸ ಅನುಗ್ರಹ ಪ್ರಶಸ್ತಿ” ಪ್ರದಾನ ಮಾಡಿ ಗೌರವಿಸಲಾಯಿತು.

ದಾಸಸಾಹಿತ್ಯ ವಿದ್ವಾಂಸ, ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ.ವ್ಯಾಸರಾಜ ಸಂತೆಕೆಲ್ಲೂರ,  ವಿಜಯವಾಣಿ  ವರದಿಗಾರ ಶಾಮಸುಂದರ ಕುಲಕರ್ಣಿ, ಸಂಯುಕ್ತ ಕರ್ನಾಟಕ ವರದಿಗಾರ ಎಚ್. ಶೇಷಗಿರಿ ಪ್ರಶಸ್ತಿ ಸ್ವೀಕರಿಸಿದರು. ಉತ್ತರಾದಿ ಮಠದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪಂ. ವಿದ್ಯಾಧೀಶಾಚಾರ್ಯ ಗುತ್ತಲ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಹಿರಿಯ ಪತ್ರಕರ್ತ ಎಸ್.ಕೆ. ಶೇಷಚಂದ್ರಿಕ, ಶ್ರೀನಿವಾಸ ಉತ್ಸವ ಬಳಗದ ಅಧ್ಯಕ್ಷ ವಾದಿರಾಜ ತಾಯಲೂರು, ಬೆಂಗಳೂರು ಗಾಯನ ಸಮಾಜದ ಅಧ್ಯಕ್ಷ ಡಾ. ಎಂ.ಆರ್.ವಿ. ಪ್ರಸಾದ್, ಕೋಣನಕುಂಟೆ ಶ್ರೀನಿಧಿ ಶ್ರೀನಿವಾಸ ದೇವಸ್ಥಾನದ ಧರ್ಮದರ್ಶಿ ಡಾ.ಕೆ.ಎಸ್. ಸಮೀರಸಿಂಹ  ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಪುರಂದರದಾಸರ ಉತ್ಸವ ಮೂರ್ತಿಗೆ ವಿಶೇಷ ಅಭಿಷೇಕ ನೆರವೇರಿಸಲಾಯಿತು. ಸಂಗೀತ ಕಲಾಭೂಷಣ ವಿದ್ವಾನ್ ಎಸ್. ಶಂಕರ್ ಮತ್ತು ಶಿಷ್ಯವೃಂದದವರು ಪುರಂದರದಾಸರ ನವರತ್ನಮಾಲಿಕೆ ಕೃತಿಗಳ ಗಾಯನಗೋಷ್ಠಿ ನಡೆಸಿಕೊಟ್ಟರು.

emedialine

Recent Posts

ಕ.ಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ ಶೀಘ್ರ ಅಸ್ತಿತ್ವಕ್ಕೆ; ಸಿದ್ದರಾಮಯ್ಯ

ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…

5 mins ago

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

1 hour ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

5 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

11 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420