ಕಲಬುರಗಿ: ನಗರದ ಡಾ. ಅಂಬೇಡ್ಕರ ಕಲಾ ವಾಣಿಜ್ಯ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಎಂ.ಎ. ಎಂ.ಕಾಂ., ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದ ಮುಖ್ಯ ಅತಿಥಿಗಳಾದ ಗುಲಬರ್ಗಾ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಡೀನರು ಹಾಗೂ ರಾಜ್ಯಶಾಸ್ತ್ರ ಅಧ್ಯಯನ ಮುಖ್ಯಸ್ಥರಾದ ಪ್ರೊ. ಚಂದ್ರಕಾಂತ ಎಂ. ಯಾತನೂರ ಹೇಳಿದರು.
ವಿದ್ಯಾರ್ಥಿಗಳು ಸಮಾಜದಲ್ಲಿ ನೂರಾರು ಸಮಸ್ಯವಿದೆ ಅದನ್ನು ಕಂಡು ಹಿಡಿಯಬೇಕು ಅಂದಾಗ ಮಾತ್ರ ನಿಮ್ಮ ಜೀವನ ಬಂಗಾರವಾಗುತ್ತದೆ. ವಿದ್ಯಾರ್ಥಿಗಳು ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೆ ನಿಮ್ಮ ಭವಿಷ್ಯವನ್ನು ನೀವು ರೂಪಿಸಿಕೊಳ್ಳಬೇಕು. ನಿಮ್ಮ ತಂದೆ ತಾಯಿಗಳು ನಿಮ್ಮ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದನ್ನು ಇಡೇರಿಸಬೇಕಾದರೆ ಸದಾ ಅಧ್ಯಯನ ಅಧ್ಯಾಪನದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಯಾವುದೇ ಒಂದು ಶಿಕ್ಷಣ ಸಂಸ್ಥೆಗೆ ಒಳ್ಳೆಯ ಹೆಸರು ಬರಬೇಕೆಂದರೆ ಅಲ್ಲಿನ ಆಡಳಿತ ಮಂಡಳಿ ಮತ್ತು ಶಿಕ್ಷಕರು ಇರಬೇಕು ಇಂತಹ ಒಳ್ಳೆಯ ಶಿಕ್ಷಕರನನ್ನು ಡಾ. ಅಂಬೇಡ್ಕರ ಕಾಲೇಜು ಹೊಂದಿದೆ ಮತ್ತು ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿದೆ ಎಂದು ಹೇಳುತ್ತ ನಿಮ್ಮ ಭವಿಷ್ಯವನ್ನು ನೀವು ರೂಪಿಸಿಕೊಂಡು ಒಳ್ಳೆಯ ನಾಗರಿಕರಾಗಿ ಕಾಲೇಜಿನ ಕೀರ್ತಿ ತರಬೇಕು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕೆ.ಪಿ.ಇ. ಸಂಸ್ಥೆಯ ಪ್ರಧಾನ ಕಾರ್ಯಾದರ್ಶಿಗಳಾದ ಡಾ. ಮಾರುತಿರಾವ ಡಿ. ಮಾಲೆಯವರು ವಿದ್ಯಾರ್ಥಿಗಳು ಸ್ನಾತಕೋತ್ತರ ಅಧ್ಯಯನವನ್ನು ಕೈಗೊಂಡು ಸಮಾಜದಲ್ಲಿರುವ ಮೂಢ ನಂಬಿಕೆಗಳನ್ನು ಹೊಗಲಾಡಿಸಬೇಕು. ವಿದ್ಯಾರ್ಥಿಗಳು ಒಳ್ಳೆಯ ಅಧ್ಯಯನ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಬೇಕೆಂದರು.
ಕಾಲೇಜಿನ ಪ್ರಾಚಾಂiiರಾದ ಡಾ. ಐ.ಎಸ್. ವಿದ್ಯಾಸಾಗರ ಸ್ವಾಗತ ಮತ್ತು ಪ್ರಾಸ್ಥಾವಿಕ ಮಾತನಾಡುತ್ತ ಸಾಧನೆ ಎಂಬುದು ಸೋಮಾರಿಯ ಸೊತ್ತಲ್ಲ ಅದು ಸಾಧಕನ ಸೊತ್ತು. ವಿದ್ಯಾರ್ಥಿಗಳೆ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಲು ಎರಡು ವರ್ಷಗಳ ಕಾಲ ತಪಸ್ವಿಯ ರೀತಿಯಲ್ಲಿ ಅಧ್ಯಯನ ಮಾಡಬೇಕೆಂದರು.
ಸಮಾರಂಭದಲ್ಲಿ ಪ್ರೊ. ನಿರ್ಮಲಾ ಸಿರಗಾಪುರ, ಡಾ. ಅಂಬರೀಷ ದೇವರಗುಡಿ, ಪ್ರೊ. ಜ್ಯೋತಿ ರೇಷ್ಮಿ, ಪ್ರೊ. ಮಹಾಂತೇಶ ಬಿದನೂರು, ಡಾ. ಸೋಮಶೇಖರ ವಿದ್ಯಾಸಾಗರ, ಪ್ರೊ. ಶರಣ ಪಾಟೀಲ, ಡಾ. ಶರಣಪ್ಪ ಕಟ್ಟಿ, ಈ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪ್ರೊ. ನೀಲಮ್ಮ ಪಾಟೀಲ ಕಾರ್ಯಾಕ್ರಮ ನಿರೂಪಿಸಿದರು. ಪ್ರೊ. ವರ್ಷಾ ಚವ್ಹಾಣ ವಂದಿಸಿದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…