ವಿರೋಧ ಪಕ್ಷದ ನಾಯಕರಾಗಿ ಖರ್ಗೆ ಆಯ್ಕೆ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮ

0
69

ಶಹಾಬಾದ: ರಾಜ್ಯಸಭೆ ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ಡಾ.ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಿದಕ್ಕೆ ಶನಿವಾರ ನಗರದ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಮಜ್ಜಿದ್ ವೃತ್ತದಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ, ಲೋಕಸಭೆಯಲ್ಲಿ ಮೋದಿ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತುವವರು ಯಾರಾದರೂ ಇದ್ದರೇ ಅವರೇ ಮಲ್ಲಿಕಾರ್ಜುನ ಖರ್ಗೆ ಅವರು. ರಾಜಕೀಯವಾಗಿ ಅಪಾರ ಅನುಭವ ಹೊಂದಿರುವ ಅವರು ಪಕ್ಷ ನೀಡಿದ ಜವಾಬ್ದಾರಿಯನ್ನು ಅನುಭವ ಹಾಗೂ ತಮ್ಮ ವಾಕ್ ಚಾತುರ್ಯದ ಮೂಲಕ ಯಶಸ್ವಿಯಾಗಿ ಕಾರ್ಯನಿರ್ವಹಿಸುವ ಮೂಲಕ ಸರ್ಕಾರದ ತಪ್ಪು ನಡೆಗಳ ವಿರುದ್ಧ ಚಾಟಿ ಬೀಸುವ ಏಕೈಕ ನಾಯಕ ಖರ್ಗೆಜಿ ಅವರು ಎಂದು ಹೇಳಿದರು.

Contact Your\'s Advertisement; 9902492681

ಇದನ್ನೂ ಸಹ ಓದಿ: ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್,ಉಪಾಧ್ಯಕ್ಷ ವಿಜಯಕುಮಾರ ಮುಟ್ಟತ್ತಿ,ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ, ಎಪಿಎಮ್‌ಸಿ ಅಧ್ಯಕ್ಷ ಸಿದ್ದುಗೌಡ ಅಫಜಲಪೂರಕರ, ಮೃತ್ಯುಂಜಯ್ ಹಿರೇಮಠ,ಹಾಷಮ್‌ಖಾನ, ಅಜಿತ್ ಪಾಟೀಲ, ಶರಣಗೌಡ ಪಾಟೀಲ ಗೋಳಾ,ಸುಭಾಷ ಪವಾರ, ಸುಭಾಷ ಪಂಚಾಳ, ಮಾಣಿಕ್‌ಗೌಡ,ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ,ಸಾಹೇಬಗೌಡ ಬೋಗುಂಡಿ, ರಾಜೇಶ ಯನಗುಂಟಿಕರ್,ಅನ್ವರ ಪಾಶಾ,ಕುಮಾರ ಚವ್ಹಾಣ, ಡಾ.ಅಹ್ಮದ್ ಪಟೇಲ್, ಯುವ ಕಾಂಗ್ರೆಸ್ ಅಧ್ಯಕ್ಷ ಕಿರಕುಮಾರ ಚವ್ಹಾಣ, ದೇವೆಂದ್ರ ಕಾರೊಳ್ಳಿ, ಸ್ನೇಹಲ್ ಜಾಯಿ, ಶರಣಗೌಡ ಪಾಟೀಲ ದಳಪತಿ, ನಾಗಣ್ಣ ರಾಂಪುರೆ, ಸುರೇಶ ನಾಯಕ ಸೇರಿದಂತೆ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here